Webdunia - Bharat's app for daily news and videos

Install App

ಬಿಜೆಪಿ ಜತೆ ಸರಕಾರ ರಚಿಸಲ್ಲ: ದೇವೇಗೌಡ ಶಪಥ

Webdunia
ಗುರುವಾರ, 10 ಮೇ 2018 (13:26 IST)
ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಬಿಜೆಪಿ ಜತೆಗೆ ಸರಕಾರ ರಚಿಸುವುದಿಲ್ಲ ಸ್ವಂತ ಬಲದ ಮೇಲೆ ಜೆಡಿಎಸ್ ಸರಕಾರ ರಚಿಸುವುದಾಗಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಚನ್ನಪಟ್ಟಣದಲ್ಲಿ ತಿಳಿಸಿದ್ರು. 
ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ಪುತ್ರ ಹೆಚ್.ಡಿ.ಕುಮಾರಸ್ವಾಮಿ ಪರ ಮತಯಾಚನೆ ಮಾಡಿದ್ರು. ತಾಲೂಕಿನ ವಿವಿಧ ಗ್ರಾಮಗಳಲ್ಲಿ ರೋಡ್ ನಡೆಸಿ ಪಟ್ಟಣದ ಸೇರ್ವಹೋಟೆಲ್ ಬಳಿ ಮುಸ್ಲಿಂ ಭಾಂಧವರನ್ನ ಉದ್ದೇಶಿಸಿ ಹೆಚ್ಡಿಡಿ ಬಹಿರಂಗವಾಗಿ ಮಾತನಾಡಿದ್ರು. 
 
ಹೆಚ್ಡಿಕೆ ಮುಖ್ಯಮಂತ್ರಿಯಾಗಲು ಬಿಜೆಪಿ ಜತೆಗೆ ಕೈಜೋಡಿಸುತ್ತಾರೆ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ ಇದಕ್ಕೆಲ್ಲ ನೀವು ಕಿವಿಗೊಡಬೇಡಿ ಎಂದು ಕೈಮುಗಿದು ಮನವಿ ಮಾಡಿದ್ರು. ನಮ್ಮಲ್ಲೆ ಇದ್ದಂತಹ ಒಬ್ಬರು ಬೆಂಗಳೂರಿನಿಂದ ಬಂದು ಕುಮಾರಸ್ವಾಮಿಗೆ ಮತ ನೀಡಬೇಡಿ 2 ಲಕ್ಷ ಕೊಡುತ್ತಿನಿ, 3 ಲಕ್ಷ ಕೊಡುತ್ತಿನಿ ಎಂದು ಒಬ್ಬ ಮಹಾನುಭಾವ ಹೇಳುತ್ತಿದ್ದಾರೆ ಎಂದು ಜಮೀರ್ ಹೆಸರೇಳದೆ ವಾಗ್ದಾಳಿ ನಡೆಸಿದ್ರು. 
 
ಹೆಚ್ಡಿಕೆ ಎರಡು ಕ್ಷೇತ್ರದಲ್ಲಿ ಗೆಲುತ್ತಾರೆ ಜತೆಗೆ ರಾಜ್ಯದಲ್ಲಿ 113 ಸ್ಥಾನ ಬಂದು ಸರಕಾರ ರಚಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ರು. ಇನ್ನು ದೇವೇಗೌಡ್ರು ಮಾಗಡಿ ಕ್ಷೇತ್ರಕ್ಕೆ ಬಂದು ಕಣ್ಣೀರು ಹಾಕುತ್ತಾರೆ, ನಗುವ ಹೆಂಗಸನ್ನ ಅಳುವ ಗಂಡಸನ್ನ ನಂಬಬಾರದು ಎಂದು ಹೇಳಿಕೆ ನೀಡಿದ್ದ ಮಾಗಡಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹೆಚ್.ಸಿ.ಬಾಲಕೃಷ್ಣ ಹೇಳಿಕೆಗೆ ಪ್ರತಿಕ್ರಿಯಿಸಿದ ದೇವೇಗೌಡ್ರು ಅಂತಹ ವ್ಯಕ್ತಿಗಳ ಬಗ್ಗೆ ಒಬ್ಬ ಮಾಜಿ ಪ್ರಧಾನಿ ಬಳಿ ಉತ್ತರ ನೀರಿಕ್ಷೆ ಮಾಡಬಾರದು ಎಂದು ಹೆಚ್ಡಿಡಿ ಬಾಲಕೃಷ್ಣಗೆ ತಿರುಗೇಟು ನೀಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments