ಕಾಂಗ್ರೆಸ್ ಕಾರ್ಯಕ್ರಮ ಸರಳವಾಗಿ ಮಾಡುತ್ತೆವೆ - ಡಿ. ಕೆ. ಶಿವಕುಮಾರ್

Webdunia
ಶುಕ್ರವಾರ, 21 ಜನವರಿ 2022 (17:03 IST)
ಕಾಂಗ್ರೆಸ್ ನ ಎಲ್ಲಾ ಮುಖಂಡರ ಸಮ್ಮುಖದಲ್ಲಿ ಮಾಜಿ ಎಂಎಲ್ಸಿ ಕಾಂತರಾಜು ಅವರು ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಎಲ್ಲ ಮುಖಂಡರು ಒಪ್ಪಿ, ಬಹಳ ಸಂತೋಷದಿಂದ ಮಾಜಿ ಎಂಎಲ್ಸಿ ಕಾಂತರಾಜು ಅವರನ್ನು ಪಕ್ಷಕ್ಕೆ ಸ್ವಾಗತಿಸುತ್ತಿದ್ದೇವೆ.
ವಿವಿಧ ಪಕ್ಷಗಳಿಂದ ಕಾಂಗ್ರೆಸ್ ಪಕ್ಷ ಸೇರಲು ಸುಮಾರು ಅರ್ಜಿಗಳು ನನ್ನ ಹಾಗೂ ಪಕ್ಷದ ಸಮಿತಿ ಮುಂದೆ ಇವೆ. ಈ ಅರ್ಜಿಗಳ ಬಗ್ಗೆ ನಾವು ಚರ್ಚೆ ಮಾಡುತ್ತಿದ್ದು,
 
ಸ್ಥಳೀಯ ನಾಯಕರ ಒಮ್ಮತ ಇರುವ ಕಡೆ ಮೊದಲು ತೀರ್ಮಾನ ಮಾಡಿ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದ್ದೇವೆ ಎಂದು ಹೇಳಿದರು. ಇನ್ನೂ ಕಾಂತರಾಜು ಅವರು ತುಮಕೂರಿನಿಂದ ವಿಧಾನ ಪರಿಷತ್ ಗೆ ಆಯ್ಕೆಯಾಗಿದ್ದರು. ಜಿಲ್ಲಾ ಕಾಂಗ್ರೆಸ್ ಹಾಗೂ ಮುಖಂಡರು ಒಪ್ಪಿಗೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಗಿದೆ. ದೊಡ್ಡ ಸಮಾರಂಭ ಮಾಡುವ ಇಚ್ಛೆ ಇತ್ತು. ಕೋವಿಡ್ ಹಿನ್ನೆಲೆಯಲ್ಲಿ ಸರಳವಾಗಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಮಾಡಿದ್ದೇವೆ. ಮತ್ತೊಂದು ದಿನ ದೊಡ್ಡ ಮಟ್ಟದಲ್ಲಿ ಕಾರ್ಯಕ್ರಮ ಮಾಡಿ ಎಲ್ಲರನ್ನು ಆಹ್ವಾನಿಸಲಾಗುತ್ತದೆ ಎಂದು ಡಿಕೆಶಿ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಹಲ್ಗಾಮ್‌ ಭಯೋತ್ಪಾದನಾ ದಾಳಿ: ಎನ್‌ಐಎ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಪಾರ್ಟಿ ಮಾಡುತ್ತಿದ್ದಾಗ ಪೊಲೀಸರ ಎಂಟ್ರಿ, ಹೆದರಿ ನಾಲ್ಕನೇ ಫ್ಲೋರ್‌ನಿಂದ ಹಾರಿದ್ರಾ ಯುವತಿ

ಮಹಿಳೆಯರಿರುವುದು ಗಂಡನ ಜತೆ ಮಲಗುವುದಕ್ಕೆ: ಕೇರಳ ಸಿಪಿಎಂ ಮುಖಂಡನ ವಿವಾದಾತ್ಮಕ ಹೇಳಿಕೆ

ಮೊಟ್ಟೆ ಪ್ರಿಯರೇ ಹುಷಾರ್ : ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಶಾಕಿಂಗ್ ಮಾಹಿತಿ

ಕೌಟುಂಬಿಕ ಕಲಹಕ್ಕೆ ಪತ್ನಿಯನ್ನು ಮುಗಿಸಿ, ತಾನೂ ಆತ್ಮಹತ್ಯೆಗೆ ಶರಣಾದ ಪತಿ

ಮುಂದಿನ ಸುದ್ದಿ
Show comments