Webdunia - Bharat's app for daily news and videos

Install App

ಸುಹಾನಾಗೆ ಧಮ್ಕಿ ಹಾಕಿದವರ ವಿರುದ್ಧ ಕ್ರಮ: ಯು.ಟಿ. ಖಾದರ್

Webdunia
ಬುಧವಾರ, 8 ಮಾರ್ಚ್ 2017 (13:44 IST)
ಜೀ ಕನ್ನಡದ ಸರಿಗಮಪ ಕಾರ್ಯಕ್ರಮದಲ್ಲಿ ಹಿಂದೂ ದೇವರನ್ನ ಸ್ತುತಿಸುವ ಹಾಡನ್ನ ಹಾಡಿದ್ದ ಯುವತಿ ಸುಹಾನಾ ಸಯ್ಯದ್`ಗೆ ಕೆಲ ಮೂಲಭೂತವಾದಿಗಳು ಸೋಶಿಯಲ್ ಮೀಡಿಯಾದಲ್ಲಿ ಧಮ್ಕಿ ಹಾಕುತ್ತಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಆಹಾರ ಸಚಿವ ಯು.ಟಿ. ಖಾದರ್, ಸಾಮಾಜಿಕ ಜಾಲತಾಣಗಳಲ್ಲಿ ಯುವತಿಗೆ ಧಮ್ಕಿ ಹಾಕುವವರ ವಿರುದ್ಧ ಸೈಬರ್ ಕ್ರೈಂ ಕಾನೂನಿನಡಿ ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಯುವತಿ ಒಂದೊಮ್ಮೆ ಧರ್ಮದ ವಿರುದ್ಧ ನಡೆದುಕೊಂಡರೆ ಅದರ ಬಗ್ಗೆ ಮಾತನಾಡಲು ಹಿರಿಯರಿದ್ದಾರೆ. ಅದನ್ನ ಬಿಟ್ಟು ಈ ರೀತಿ ತೊಂದರೆ ಕೊಡುವುದು ಸರಿಯಲ್ಲ  ಎಂದು ಖಾದರ್ ಹೇಳಿದ್ದಾರೆ.

ಧರ್ಮದ ಹೆಸರಲ್ಲಿ ಸುಹಾನಾಗೆ ಧಮ್ಕಿ ಹಾಕಿದ್ದು ಖಂಡನೀಯ, ಯಾವುದೇ ಕಾರಣಕ್ಕೂ ಸುಹಾನಾ ಹಾಡುವುದನ್ನ ನಿಲ್ಲಿಸಬಾರದು ಸಂಸದ ಪ್ರತಾಪ್ ಸಿಂಹ ಖಾಸಗಿ ಚಾನಲ್`ಗೆ ಪ್ರತಿಕ್ರಿಯೆ ನೀಡಿದ್ದಾರೆ.

 ಜಾತಿ, ಧರ್ಮದ ಹೆಸರಲ್ಲಿ ಕಲೆಗೆ ಬೇಲಿ ಹಾಕುವುದು ತಪು, ಧಮ್ಕಿ ಹಾಕುವವರ ವಿರುದ್ಧ ಕ್ರಮ ಜರುಗಿಸಬೇಕೆಂದು ಚಿಂತಕ ಷರಿಯಾರ್ ಖಾನ್ ಹೇಳಿದ್ದಾರೆ.


ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments