ಅಕ್ಕಿ ಕೊಡುವುದಂತೂ ನಿಶ್ಚಿತ ಯಾವಾಗ ಕೊಡುವುದು ಎಂದು ಸೋಮವಾರ ಹೇಳ್ತೇವೆ- ಸಿಎಂ

Webdunia
ಶನಿವಾರ, 17 ಜೂನ್ 2023 (20:17 IST)
ಹೊರರಾಜ್ಯಗಳಿಂದ ಅಕ್ಕಿ ಖರೀದಿ ವಿಚಾರವಾಗಿ ತೆಲಂಗಾಣದಲ್ಲಿ ನಾನೇ ಅಲ್ಲಿನ ಸಿಎಂ ಜತೆ ಮಾತಾಡಿದೀನಿ.ಅಲ್ಲಿ ಅಕ್ಕಿ ಸಿಕ್ತಾ ಇಲ್ವಂತೆ.ನಮ್ಮ ಸಿಎಸ್ ಅವರಿಗೂ ಮಾತಾಡೋಕ್ಕೆ ಹೇಳಿದೀನಿ.ಛತ್ತೀಸ್ಗಢ ರಾಜ್ಯದವರು 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡೋದಾಗಿ ಹೇಳಿದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಛತ್ತೀಸ್ಗಢದ ಅಕ್ಕಿಗೆ ಸ್ವಲ್ಪ ದರ ಜಾಸ್ತಿ.ಸಾಗಣೆ ವೆಚ್ಚವೂ ಜಾಸ್ತಿ.ಇವತ್ತು ಸಂಜೆ ಸಭೆ ಮಾಡ್ತೇವೆ. ನಂತರ ಹೇಳ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಆಂಧ್ರದ ಜತೆ ನಮ್ಮ ಸಿಎಸ್ ಅವರನ್ನು ಮಾತಾಡೋಕೆ ಹೇಳಿದೀನಿ‌ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು.
 
ಇನ್ನೂ ಕಮೀಷನ್ ಗಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡ್ತಿದಾರೆ ಎಂಬ ವಿಜಯೇಂದ್ರ ಆರೋಪ ವಿಚಾರಕ್ಕೆ ವಿಜಯೇಂದ್ರಗೆ ಸಿಎಂ ತಿರುಗೇಟು ನೀಡಿದ್ದಾರೆ.ಇಲ್ಲಿ ಅಕ್ಕಿ ಕೊಡಿಸಲಿ ವಿಜಯೇಂದ್ರ.ಮಿಲ್ ನಲ್ಲಿ ಇದೆಯಾ ಅಷ್ಟು ಅಕ್ಕಿ?ಸುಮ್ನೆ ಮಾತಾಡ್ತಾರೆ ಅಂತ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.
 
ಇನ್ನೂ ಅಕ್ಕಿ ಕೊಡುವುದಂತೂ ನಿಶ್ಚಿತ.ಯಾವತ್ತಿಂದ ಕೊಡೋದಕ್ಕೆ ಅನುಕೂಲ ಅಂತ ತೀರ್ಮಾನ ಮಾಡಬೇಕಾಗುತ್ತೆ.ಅಲ್ಲಿಂದ ಸಾಗಾಣೆಗೆ ತಡವಾಗಬಹು.ಇಲ್ಲಿ ಸ್ಟಾಕ್ ಇತ್ತು ಅಂತ ನಾವು ದಿನಾಂಕ ಘೋಷಣೆ ಮಾಡಿದ್ವಿ.ನಾವು ಬೇರೆ ವ್ಯವಸ್ಥೆ ಮಾಡ್ತೀವಿ.ಪಾಸಿಟಿವ್ ರೆಸ್ಪನಾನ್ಸ್ ಸಿಕ್ಕಿದೆ.ಸೋಮವಾರದಂದು ಯಾವಾಗ ಕೊಡ್ತೀವಿ ಅನ್ನೋದನ್ನ ಹೇಳ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಚಿಕ್ಕಮಗಳೂರು ಮೆಡಿಕಲ್ ಕಾಲೇಜಿನ ಜೀವರಕ್ಷಕ ಔಷಧಿ ಟೆಂಡರ್ ನಲ್ಲಿ ಗೋಲ್ಮಾಲ್: ಸಿ.ಟಿ.ರವಿ

ಇಂದಿರಾ ಗಾಂಧಿ ಪುಸ್ತಕ 100 ರೂ ಕೊಟ್ಟು ತಗೊಂಡು ಹೋಗಿ: ಡಿಕೆ ಶಿವಕುಮಾರ್ ತಾಕೀತು

ಭ್ರಷ್ಟ, ಜನ ವಿರೋಧಿ ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿ ಹೋರಾಟಕ್ಕೆ ನಿರ್ಧಾರ

Viral video: ಅಬ್ಬಬ್ಬಾ ಶಕ್ತಿಮಾನ್ ನಾಯಿಯಿದು.. ಕಾರಿನ ಸ್ಥಿತಿ ಏನು ಮಾಡಿತು ನೋಡಿ

ಮುಂದಿನ ಸುದ್ದಿ
Show comments