Webdunia - Bharat's app for daily news and videos

Install App

ಅಕ್ಕಿ ಕೊಡುವುದಂತೂ ನಿಶ್ಚಿತ ಯಾವಾಗ ಕೊಡುವುದು ಎಂದು ಸೋಮವಾರ ಹೇಳ್ತೇವೆ- ಸಿಎಂ

Webdunia
ಶನಿವಾರ, 17 ಜೂನ್ 2023 (20:17 IST)
ಹೊರರಾಜ್ಯಗಳಿಂದ ಅಕ್ಕಿ ಖರೀದಿ ವಿಚಾರವಾಗಿ ತೆಲಂಗಾಣದಲ್ಲಿ ನಾನೇ ಅಲ್ಲಿನ ಸಿಎಂ ಜತೆ ಮಾತಾಡಿದೀನಿ.ಅಲ್ಲಿ ಅಕ್ಕಿ ಸಿಕ್ತಾ ಇಲ್ವಂತೆ.ನಮ್ಮ ಸಿಎಸ್ ಅವರಿಗೂ ಮಾತಾಡೋಕ್ಕೆ ಹೇಳಿದೀನಿ.ಛತ್ತೀಸ್ಗಢ ರಾಜ್ಯದವರು 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಕೊಡೋದಾಗಿ ಹೇಳಿದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
 
ಛತ್ತೀಸ್ಗಢದ ಅಕ್ಕಿಗೆ ಸ್ವಲ್ಪ ದರ ಜಾಸ್ತಿ.ಸಾಗಣೆ ವೆಚ್ಚವೂ ಜಾಸ್ತಿ.ಇವತ್ತು ಸಂಜೆ ಸಭೆ ಮಾಡ್ತೇವೆ. ನಂತರ ಹೇಳ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಆಂಧ್ರದ ಜತೆ ನಮ್ಮ ಸಿಎಸ್ ಅವರನ್ನು ಮಾತಾಡೋಕೆ ಹೇಳಿದೀನಿ‌ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು.
 
ಇನ್ನೂ ಕಮೀಷನ್ ಗಾಗಿ ಹೊರ ರಾಜ್ಯಗಳಿಂದ ಅಕ್ಕಿ ಖರೀದಿ ಮಾಡ್ತಿದಾರೆ ಎಂಬ ವಿಜಯೇಂದ್ರ ಆರೋಪ ವಿಚಾರಕ್ಕೆ ವಿಜಯೇಂದ್ರಗೆ ಸಿಎಂ ತಿರುಗೇಟು ನೀಡಿದ್ದಾರೆ.ಇಲ್ಲಿ ಅಕ್ಕಿ ಕೊಡಿಸಲಿ ವಿಜಯೇಂದ್ರ.ಮಿಲ್ ನಲ್ಲಿ ಇದೆಯಾ ಅಷ್ಟು ಅಕ್ಕಿ?ಸುಮ್ನೆ ಮಾತಾಡ್ತಾರೆ ಅಂತ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ.
 
ಇನ್ನೂ ಅಕ್ಕಿ ಕೊಡುವುದಂತೂ ನಿಶ್ಚಿತ.ಯಾವತ್ತಿಂದ ಕೊಡೋದಕ್ಕೆ ಅನುಕೂಲ ಅಂತ ತೀರ್ಮಾನ ಮಾಡಬೇಕಾಗುತ್ತೆ.ಅಲ್ಲಿಂದ ಸಾಗಾಣೆಗೆ ತಡವಾಗಬಹು.ಇಲ್ಲಿ ಸ್ಟಾಕ್ ಇತ್ತು ಅಂತ ನಾವು ದಿನಾಂಕ ಘೋಷಣೆ ಮಾಡಿದ್ವಿ.ನಾವು ಬೇರೆ ವ್ಯವಸ್ಥೆ ಮಾಡ್ತೀವಿ.ಪಾಸಿಟಿವ್ ರೆಸ್ಪನಾನ್ಸ್ ಸಿಕ್ಕಿದೆ.ಸೋಮವಾರದಂದು ಯಾವಾಗ ಕೊಡ್ತೀವಿ ಅನ್ನೋದನ್ನ ಹೇಳ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಸಿದ್ದರಾಮಯ್ಯಗೆ ಆರ್ ಎಸ್ಎಸ್ ಬಗ್ಗೆ ವಿವರವಾಗಿ ಹೇಳಿದ ಬಿವೈ ವಿಜಯೇಂದ್ರ

ಧರ್ಮಸ್ಥಳ ಚಲೋಗೆ ಚಾಲನೆ ನೀಡಿದ ಬಿಜೆಪಿ

ಡಾ ಸಿಎನ್ ಮಂಜುನಾಥ್ ಪ್ರಕಾರ ಹೆಣ್ಣುಮಕ್ಕಳಲ್ಲೂ ಹೃದಯಾಘಾತ ಹೆಚ್ಚಲು ಇದೇ ಕಾರಣ

ಮೋದಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಟೀಕೆ: ನೀವು ಎಮರ್ಜೆನ್ಸಿ ಹೇರಬಹುದಾ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments