Webdunia - Bharat's app for daily news and videos

Install App

ದುರ್ಬಲ ಮನಸ್ಸಿನವರು ಪೊಲೀಸ್ ಇಲಾಖೆಗೆ ಬರದಿರುವುದು ಒಳ್ಳೆಯದು: ಮೀರಾ

Webdunia
ಬುಧವಾರ, 20 ಜುಲೈ 2016 (18:22 IST)
ಪೊಲೀಸರ ಮೇಲೆ ಹಲವು ರೀತಿಯ ಒತ್ತಡಗಳು ಬರುತ್ತಿರುತ್ತವೆ. ಹೀಗಾಗಿ ದುರ್ಬಲ ಮನಸ್ಸಿನವರು ಇಲಾಖೆಗೆ ಬರದಿರುವುದು ಒಳ್ಳೆಯದು ಎಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷೆ ಮೀರಾ ಸಕ್ಸೇನಾ ಹೇಳಿದ್ದಾರೆ. 
 
ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಒತ್ತಡಗಳಿರುತ್ತವೆ. ಆದರೆ, ಒತ್ತಡಕ್ಕೆ ಮಣಿದು ಆತ್ಮಹತ್ಯೆಗೆ ಮಾಡಿಕೊಳ್ಳುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. 
 
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷೆ ಮೀರಾ ಸಕ್ಸೇನಾ, ಮಂಗಳೂರು ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣ ಕೋರ್ಟ್‌ನಲ್ಲಿರುವುದರಿಂದ ನಾವೇನು ಪ್ರತಿಕ್ರಿಯೆ ನೀಡಲು ಬರುವುದಿಲ್ಲ. ಪೊಲೀಸ್ ಇಲಾಖೆಯಲ್ಲಿ ಸಾಕಷ್ಟು ಒತ್ತಡಗಳಿರುತ್ತವೆ. ಆದರೆ, ಒತ್ತಡಕ್ಕೆ ಮಣಿದು ಆತ್ಮಹತ್ಯೆಗೆ ಮಾಡಿಕೊಳ್ಳುವುದು ಸರಿಯಲ್ಲ ಎಂದರು.
 
ಬೆಂಗಳೂರಿನ ಮಹಿಳಾ ಪಿಎಸ್‌ಐ ರೂಪಾ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಹಿರಿಯ ಅಧಿಕಾರಿಗಳ ಜೊತೆ ನಡೆದ ವಾಗ್ವಾದದಿಂದ ಆತ್ಮಹತ್ಯೆ ಯತ್ನ ಮಾಡುವುದು ಸರಿಯಲ್ಲ. ಹಿರಿಯ ಅಧಿಕಾರಿಗಳು ಪ್ರಶ್ನೆ ಕೇಳದೆ ಆಡಳಿತ ನಡೆಸಲು ಸಾಧ್ಯವಿಲ್ಲ. ದುರ್ಬಲ ಮನಸ್ಸಿನವರು ಇಲಾಖೆಗೆ ಬರದಿರುವುದು ಒಳ್ಳೆಯದು ಎಂದು ಸಲಹೆ ನೀಡಿದ್ದರು.
 
ಇಲಾಖೆಯಲ್ಲಿನ ಒತ್ತಡ ಕಡಿಮೆ ಮಾಡಲು ಪೊಲೀಸರಿಗೆ ಕೌನ್ಸಲಿಂಗ್ ಮಾಡುವುದು ಸೂಕ್ತ ಎಂದು ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷೆ ಮೀರಾ ಸಕ್ಸೇನಾ ಅಭಿಪ್ರಾಯ ಪಟ್ಟಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನರೇಂದ್ರ ಮೋದಿ ಮತ್ತು ದೇವೇಗೌಡರದು ಜನ್ಮಜನ್ಮದ ಅನುಬಂಧ: ವಿಜಯೇಂದ್ರ ಬಣ್ಣನೆ

ಚಿನ್ನಯ್ಯ ತಂದ ಬುರುಡೆ ಮೂಲ ತನಿಖೆ: ಸೌಜನ್ಯ ಮಾವ ವಿಠಲ್‌ ಗೌಡಗೆ ಡವಡವ

ಮುಂದೊಂದು ದಿನ ಭಾರತ, ಪಾಕ್ ಆಗಲಿದೆ: ಹಿಂದೂಗಳಿಗೆ ಎಚ್ಚರಿಕೆ ನೀಡಿದ ಕಲ್ಲಡ್ಕ ಭಟ್

ಎನ್‌ಡಿಎ ಸಂಸದರಿಗೆ ಮೋದಿ ನಿವಾಸದಲ್ಲಿ ಆಯೋಜಿಸಿದ್ದ ಔತಣಕೂಟ ದಿಢೀರ್ ರದ್ದು, ಕಾರಣ ಏನು ಗೊತ್ತಾ

ಒಳಮೀಸಲಾತಿ ವಿಚಾರವಾಗಿ ಸೆ10 ರಿಂದ ಬಿಜೆಪಿ ಹೋರಾಟ

ಮುಂದಿನ ಸುದ್ದಿ
Show comments