Publish Date: Thu, 18 Oct 2018 (15:25 IST)
Updated Date: Thu, 18 Oct 2018 (15:27 IST)
ವಿಜಯದಶಮಿ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಬ್ಬದ ಸಡಗರ ಮನೆ ಮಾಡಿದೆ. ಬಿಸಿಲು ನಗರಿ ಖ್ಯಾತಿಯ ಜಿಲ್ಲೆಯಲ್ಲಿ ಆಯುಧ ಪೂಜೆಯನ್ನು ಸಂಭ್ರಮದಿಂದ ಆಚರಣೆ ಮಾಡಲಾಯಿತು.
ಕಲಬುರ್ಗಿ ಜಿಲ್ಲೆಯಾದ್ಯಂತ ಆಯುಧ ಪೂಜೆಯನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ವಾಹನ, ಬಳಸುವ ಸಲಕರಣೆ ಇತ್ಯಾದಿಗಳಿಗೆ ಪೂಜೆ ಸಲ್ಲಿಸುವ ಮೂಲಕ ಜನತೆ ಶುಭವಾಗಲಿ ಎಂದು ಪ್ರಾರ್ಥಿಸಿದರು.
ಇದೇ ವೇಳೆ ಜಿಲ್ಲಾಧಿಕಾರಿ ಆರ್.ವೆಂಕಟೇಶ್ ಕುಮಾರ್ ಅವರು ಸರ್ಕಾರಿ ವಾಹನಗಳ ಪೂಜೆ ನೆರವೇರಿಸಿದರು. ಜಗತ್ ವೃತ್ತದಲ್ಲಿರುವ ಜಿಲ್ಲಾಧಿಕಾರಿ ನಿವಾಸದಲ್ಲಿ ಪತ್ನಿ ಸಮೇತರಾಗಿ ವೆಂಕಟೇಶ್ ಕುಮಾರ್ ಪೂಜೆ ನೆವರೇರಿಸಿದರು. ಸರ್ಕಾರಿ ವಾನಹಗಳ ಜೊತೆ ಪೊಲೀಸರ ಬಳಸುವ ಆಯುಧಗಳಿಗೂ ಪೂಜೆ ಸಲ್ಲಿಸಿದರು.
ಪೊಲೀಸ್ ಠಾಣೆ, ಪೊಲೀಸ್ ಭವನದಲ್ಲಿಯೂ ಆಯುಧಗಳಿಗೆ ಪೂಜೆ ಸಲ್ಲಿಸಲಾಯಿತು. ರೈತರು ಕೃಷಿ ಸಲಕರಣೆಗಳಿಗೆ ಪೂಜೆ ಸಲ್ಲಿಸಿ ಶುಭವಾಗಲಿ ಎಂದು ಪ್ರಾರ್ಥಿಸಿದರು.