ಪಾಲಕ್ಕಾಡ್, ಗೋಣಿಚೀಲದಲ್ಲಿ ಶಸ್ತ್ರಾಸ್ತ್ರಗಳು ಪತ್ತೆ: ವೈಜ್ಞಾನಿಕ ಪರೀಕ್ಷೆಗೆ ರವಾನೆ

Webdunia
ಗುರುವಾರ, 18 ನವೆಂಬರ್ 2021 (21:34 IST)
ಪಾಲಕ್ಕಾಡು ಜಿಲ್ಲೆಯ ಕಣ್ಣನ್ನೂರು ಎಂಬಲ್ಲಿ ಗೋಣಿಚೀಲವೊಂದರಲ್ಲಿ ಶಸ್ತ್ರಾಸ್ತ್ರಗಳನ್ನು ಎಸೆದು ಹೋಗಿರುವುದು ಪತ್ತೆಯಾಗಿದೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಾಲಕ್ಕಾಡು ಎಲಪಲ್ಲಿಯಲ್ಲಿ ಇತ್ತೀಚೆಗೆ ಆರ್’ಎಸ್‍ಎಸ್ ಮಂಡಲ ಬೌದ್ಧಿಕ್ ಪ್ರಮುಖ್ ಆಗಿದ್ದ ಸಂಜಿತ್‍ರನ್ನು ಕೊಲೆಗೈದ ಪಾತಕಿಗಳು ಶಸ್ತ್ರಾಸ್ತ್ರಗಳನ್ನು ಎಸೆದು ಪರಾರಿಯಾಗಿರಬಹುದೆಂದು ಸಂಶಯಿಸಲಾಗಿದೆ.
ನಾಲ್ಕು ರಾಡ್ ಗಳನ್ನು ಗೋಣಿಚೀಲದಲ್ಲಿ ಸುತ್ತಿ ಎಸೆದಿರುವುದು ಪತ್ತೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಬಳಿಯ ಸರ್ವೀಸ್ ರಸ್ತೆ ಪರಿಸರದಲ್ಲಿ ಈ ಶಸ್ತ್ರಾಸ್ತ್ರಗಳು ಕಂಡುಬಂದಿವೆ. ಇದನ್ನು ಗಮನಿಸಿದ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಸಿಐಎ ನೇತೃತ್ವದ ಪೊಲೀಸರು ಶಸ್ತ್ರಾಸ್ತ್ರಗಳನ್ನು ವೈಜ್ಞಾನಿಕ ಪರೀಕ್ಷೆಗೆ ಕಳುಹಿಸಿದ್ದಾರೆ.
ನಾಲ್ಕು ಸರಳುಗಳಲ್ಲಿ ಎರಡು ತುಕ್ಕು ಹಿಡಿದಿರುವುದು ಕಂಡು ಬಂದಿದೆ. ಆದರೆ ಒಂದು ಬಹುಮಟ್ಟಿಗೆ ಹೊಸದು. ರಕ್ತದ ಕಲೆಗಳು ಅಥವಾ ಇತರ ಚಿಹ್ನೆಗಳು ಸ್ಪಷ್ಟವಾಗಿಲ್ಲ. ವೈಜ್ಞಾನಿಕ ಪರೀಕ್ಷೆಯ ನಂತರವಷ್ಟೇ ಎಲಪಲ್ಲಿಯಲ್ಲಿ ನಡೆದ ಕೊಲೆಗೂ ಈ ಆಯುಧಗಳಿಗೂ ಸಂಬಂಧವಿದೆಯೇ ಎಂಬುದು ಖಚಿತವಾಗಲಿದೆ ಎಂದು ಸಿಐ ತಿಳಿಸಿದ್ದಾರೆ. ಇದೇ ವೇಳೆ ಸಂಜಿತ್ ರನ್ನು ಕೊಲೆಗೈದು ಎರಡು ದಿನಗಳು ಕಳೆದರೂ ಹಂತಕರನ್ನು ಪತ್ತೆಹಚ್ಚುವಲ್ಲಿ ಹಾಗೂ ಯಾವುದೇ ಸಾಕ್ಷ್ಯವನ್ನು ಹುಡುಕುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಬಿಜೆಪಿ ಪಾಲಕ್ಕಾಡು ಮಂಡಲ ಸಮಿತಿಯು ಆಕ್ರೋಶ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂದೆಯೂ ನಾನೇ ಬಜೆಟ್ ಮಂಡಿಸುತ್ತೇನೆಂದ ಸಿಎಂ ಸಿದ್ದರಾಮಯ್ಯ

ಸಿದ್ದರಾಮಯ್ಯ, ಡಿಕೆಶಿ ನಡುವೆ ಬಣ ಬಡಿದಾಟ ಇಲ್ವೇ ಇಲ್ಲ, ಎಲ್ಲಾ ಬಿಜೆಪಿ ಸೃಷ್ಟಿಯಂತೆ

ದುಬೈ ವೈಮಾನಿಕ ಪ್ರದರ್ಶನದಲ್ಲಿ ತೇಜಸ್ ವಿಮಾನ ಪತನ, ಫೈಲಟ್ ನಿಧನ

ಮದುವೆ ದಿನವೇ ಆಸ್ಪತ್ರೆ ಸೇರಿದ ವಧು, ವರನ ನಡೆಗೆ ಭಾರೀ ಮೆಚ್ಚುಗೆ

ಹೈಕಮಾಂಡ್‌ನಲ್ಲಿ ಕೆಲ ಶಾಸಕರ ಶಕ್ತಿಪ್ರದರ್ಶನ, ಕೊನೆಗೂ ಮೌನ ಮುರಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments