Webdunia - Bharat's app for daily news and videos

Install App

ಪಾಲಕ್ಕಾಡ್, ಗೋಣಿಚೀಲದಲ್ಲಿ ಶಸ್ತ್ರಾಸ್ತ್ರಗಳು ಪತ್ತೆ: ವೈಜ್ಞಾನಿಕ ಪರೀಕ್ಷೆಗೆ ರವಾನೆ

Webdunia
ಗುರುವಾರ, 18 ನವೆಂಬರ್ 2021 (21:34 IST)
ಪಾಲಕ್ಕಾಡು ಜಿಲ್ಲೆಯ ಕಣ್ಣನ್ನೂರು ಎಂಬಲ್ಲಿ ಗೋಣಿಚೀಲವೊಂದರಲ್ಲಿ ಶಸ್ತ್ರಾಸ್ತ್ರಗಳನ್ನು ಎಸೆದು ಹೋಗಿರುವುದು ಪತ್ತೆಯಾಗಿದೆ. ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಾಲಕ್ಕಾಡು ಎಲಪಲ್ಲಿಯಲ್ಲಿ ಇತ್ತೀಚೆಗೆ ಆರ್’ಎಸ್‍ಎಸ್ ಮಂಡಲ ಬೌದ್ಧಿಕ್ ಪ್ರಮುಖ್ ಆಗಿದ್ದ ಸಂಜಿತ್‍ರನ್ನು ಕೊಲೆಗೈದ ಪಾತಕಿಗಳು ಶಸ್ತ್ರಾಸ್ತ್ರಗಳನ್ನು ಎಸೆದು ಪರಾರಿಯಾಗಿರಬಹುದೆಂದು ಸಂಶಯಿಸಲಾಗಿದೆ.
ನಾಲ್ಕು ರಾಡ್ ಗಳನ್ನು ಗೋಣಿಚೀಲದಲ್ಲಿ ಸುತ್ತಿ ಎಸೆದಿರುವುದು ಪತ್ತೆಯಾಗಿದೆ. ರಾಷ್ಟ್ರೀಯ ಹೆದ್ದಾರಿ ಬಳಿಯ ಸರ್ವೀಸ್ ರಸ್ತೆ ಪರಿಸರದಲ್ಲಿ ಈ ಶಸ್ತ್ರಾಸ್ತ್ರಗಳು ಕಂಡುಬಂದಿವೆ. ಇದನ್ನು ಗಮನಿಸಿದ ಸ್ಥಳೀಯರು ಠಾಣೆಗೆ ಮಾಹಿತಿ ನೀಡಿದ ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಸಿಐಎ ನೇತೃತ್ವದ ಪೊಲೀಸರು ಶಸ್ತ್ರಾಸ್ತ್ರಗಳನ್ನು ವೈಜ್ಞಾನಿಕ ಪರೀಕ್ಷೆಗೆ ಕಳುಹಿಸಿದ್ದಾರೆ.
ನಾಲ್ಕು ಸರಳುಗಳಲ್ಲಿ ಎರಡು ತುಕ್ಕು ಹಿಡಿದಿರುವುದು ಕಂಡು ಬಂದಿದೆ. ಆದರೆ ಒಂದು ಬಹುಮಟ್ಟಿಗೆ ಹೊಸದು. ರಕ್ತದ ಕಲೆಗಳು ಅಥವಾ ಇತರ ಚಿಹ್ನೆಗಳು ಸ್ಪಷ್ಟವಾಗಿಲ್ಲ. ವೈಜ್ಞಾನಿಕ ಪರೀಕ್ಷೆಯ ನಂತರವಷ್ಟೇ ಎಲಪಲ್ಲಿಯಲ್ಲಿ ನಡೆದ ಕೊಲೆಗೂ ಈ ಆಯುಧಗಳಿಗೂ ಸಂಬಂಧವಿದೆಯೇ ಎಂಬುದು ಖಚಿತವಾಗಲಿದೆ ಎಂದು ಸಿಐ ತಿಳಿಸಿದ್ದಾರೆ. ಇದೇ ವೇಳೆ ಸಂಜಿತ್ ರನ್ನು ಕೊಲೆಗೈದು ಎರಡು ದಿನಗಳು ಕಳೆದರೂ ಹಂತಕರನ್ನು ಪತ್ತೆಹಚ್ಚುವಲ್ಲಿ ಹಾಗೂ ಯಾವುದೇ ಸಾಕ್ಷ್ಯವನ್ನು ಹುಡುಕುವಲ್ಲಿ ಪೊಲೀಸರು ವಿಫಲರಾಗಿದ್ದಾರೆ ಎಂದು ಬಿಜೆಪಿ ಪಾಲಕ್ಕಾಡು ಮಂಡಲ ಸಮಿತಿಯು ಆಕ್ರೋಶ ವ್ಯಕ್ತಪಡಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments