Select Your Language

Notifications

webdunia
webdunia
webdunia
webdunia

ಕೇಸರಿ ಶಾಲು ಧರಿಸುವುದು ಅಪರಾಧನೆ: ಡಿಕೆಶಿ ಹೇಳಿಕೆಗೆ ಎಚ್‌ಡಿಕೆ ಕೌಂಟರ್‌

ಕೇಸರಿ ಶಾಲು ಧರಿಸುವುದು ಅಪರಾಧನೆ: ಡಿಕೆಶಿ ಹೇಳಿಕೆಗೆ ಎಚ್‌ಡಿಕೆ ಕೌಂಟರ್‌

Sampriya

ಬೆಂಗಳೂರು , ಸೋಮವಾರ, 1 ಏಪ್ರಿಲ್ 2024 (19:32 IST)
ಬೆಂಗಳೂರು:  ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ  ಡಿ.ಕೆ.ಶಿವಕುಮಾರ್ ಅವರು ಇಂದು ಮತ್ತೇ ಜೆಡಿಎಸ್ ನಾಯಕ ಹೆಚ್.​ಡಿ. ಕುಮಾರಸ್ವಾಮಿ ಅವರು  ವಿರುದ್ಧ ವಾಗ್ದಾಳಿ ನಡೆಸಿದರು.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ  ಡಿಕೆಶಿ ಅವರು, ಎಚ್‌.ಡಿ.ಕುಮಾರಸ್ವಾಮಿ ಅವರು ಬಿಜೆಪಿ ಜತೆ ಸೇರಿಕೊಂಡು ತಮ್ಮ ಸಿದ್ಧಾಂತದಲ್ಲಿ ಬದುಕಿದ್ದು ಸತ್ತಂತ್ತೆ ಎಂದರು.

ಮಂಡ್ಯ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಪುಟ್ಟರಾಜು ಟಿಕೆಟ್​ಗಾಗಿ ಕಾದು ಕುಳಿತಿದ್ದ, ಇದೀಗ ಗೋವಿಂದ. ಕುಮಾರಸ್ವಾಮಿ ಕಮಲದ ಧ್ವಜ ಹಾಕಿಕೊಂಡಿದ್ದಾರೆ. ಬದುಕಿದ್ದು ಸತ್ತಂತೆ ಎಂದರು. ಕಳೆದ ಬಾರಿ ಮೈತ್ರಿಯಂತೆ ಕುಮಾರಸ್ವಾಮಿ ಅವರಿಗೆ ಸಹಾಯ ಮಾಡಲು ಬಂದಿದ್ದೆ. ಆದರೆ ಅವರಿಗೆ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಆದರೆ ಈಗ ತಮ್ಮ ಅಧಿಕಾರ ತೆಗೆದವರ ಜೊತೆಯೇ ಕುಮಾರಸ್ವಾಮಿ ಹೋಗಿದ್ದಾರೆ ಎಂದರು.

ಇದಕ್ಕೆ ತಿರುಗೇಟು ನೀಡಿದ ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು, ಕೇಸರಿ ಶಾಲು ಧರಿಸುವುದು ಅಪರಾಧನೆ. ನಮ್ಮ ಸಿದ್ಧಾಂತ ಹೃದಯ ಹಾಗೂ ನಡವಳಿಕೆಯಲ್ಲಿದೆ ಎಂದು ಡಿಕೆಶಿಗೆ ತಿರುಗೇಟು ಕೊಟ್ಟರು.




Share this Story:

Follow Webdunia kannada

ಮುಂದಿನ ಸುದ್ದಿ

ಜಾಗತಿಕವಾಗಿ ಹೆಚ್ಚಿದ ಬೇಡಿಕೆ: ಏರುತ್ತಲೇ ಇದೆ ಚಿನ್ನ, ಬೆಳ್ಳಿ ಬೆಲೆ