ಮುಂದಿನ ವಾರದಿಂದ ಮುಂಗಾರು ಆರಂಭ- ಹವಾಮಾನ ಇಲಾಖೆ ಮುನ್ಸೂಚನೆ

Webdunia
ಶನಿವಾರ, 11 ಜೂನ್ 2022 (19:08 IST)
ರಾಜ್ಯಾದ್ಯಂತ ಮುಂದಿನ ವಾರದಿಂದ ಮುಂಗಾರು ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
 
ಜೂನ್ 13 ರ ನಂತರ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ. ಮುಂಗಾರು ಮಾರುತಗಳು ರಾಜ್ಯವನ್ನು ಪ್ರವೇಶಿಸಿ ಒಂದು ವಾರ ಕಳೆದಿದೆ.
 
ಈ ಅವಧಿಯಲ್ಲಿ ವಾಡಿಕೆಗಿಂತ ಶೇಕಡ 11 ರಷ್ಟು ಮಳೆ ಕಡಿಮೆಯಾಗಿದೆ. ಜೂನ್ 3 ರಿಂದ 9ರ ವರೆಗಿನ ಅವಧಿಯಲ್ಲಿ ವಾಡಿಕೆಯಂತೆ 38 ಮಿ.ಮೀ. ಮಳೆಯಾಗಬೇಕಿತ್ತು. 34 ಮಿ.ಮೀ. ನಷ್ಟು ಮಳೆಯಾಗಿದೆ.
 
ಮುಂಗಾರು ಪ್ರವೇಶಿಸುವ ಸಂದರ್ಭದಲ್ಲಿ ಮಳೆ ಪ್ರಮಾಣ ಕಡಿಮೆ ಇದ್ದು, ಮುಂದಿನ ವಾರದಿಂದ ರಾಜ್ಯಾದ್ಯಂತ ಮುಂಗಾರು ಆವರಿಸಲಿದೆ. ಜೂನ್ 13ರ ನಂತರ ಮುಂಗಾರು ಚುರುಕುಗೊಳ್ಳಲಿದೆ ಎಂದು ಹೇಳಲಾಗಿದೆ.
 
ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜೂನ್ 10 ರಿಂದ 12ರವರೆಗೆ ದಕ್ಷಿಣ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಜೂನ್ 13ರ ನಂತರ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಧಿಕ ಮಳೆ ಸುರಿಯಲಿದೆ ಎಂದು ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karur Stampede: ಸ್ವತಂತ್ರ ತನಿಖೆ ಕೋರಿ ಸುಪ್ರೀಂ ಕೋರ್ಟ್‌ ಕದ ತಟ್ಟಿದ ನಟ ವಿಜಯ್‌ ಪಕ್ಷ

ಪಟಾಕಿ ಕಾರ್ಖಾನೆಯಲ್ಲಿ ಮತ್ತೊಂದು ದುರಂತ: ಸ್ಫೋಟ ಸಂಭವಿಸಿ ಆರು ಮಂದಿ ಕಾರ್ಮಿಕರು ಸಜೀವ ದಹನ

ಪಾಕ್‌ನಲ್ಲಿ ರಕ್ತದೋಕುಳಿ: ಎನ್‌ಕೌಂಟರ್‌ ವೇಳೆ 11 ಯೋಧರು ಸೇರಿ 30 ಮಂದಿ ಸಾವು

ಕಮಲದ ವಿನ್ಯಾಸದಲ್ಲಿ ತಯಾರಾದ ಮುಂಬೈನ ಹೊಸ ವಿಮಾನ ನಿಲ್ದಾಣ ಉದ್ಘಾಟಿಸಿದ ಮೋದಿ

134 ದಿನಗಳ ಹೋರಾಡಿಯೂ ಮಗಳ ಬಿಟ್ಟು ಹೊರಟೇ ಹೋದ ಅಪೂರ್ವ: ಮನಕಲಕುವ ಘಟನೆ

ಮುಂದಿನ ಸುದ್ದಿ
Show comments