Webdunia - Bharat's app for daily news and videos

Install App

ಇಂದು ರಾತ್ರಿಯಿಂದ ವೀಕೆಂಡ್ ಕರ್ಫ್ಯೂ ಜಾರಿ: ಅನಗತ್ಯ ಓಡಾಟ ಕಂಡುಬಂದರೆ ಕಠಿಣ ಕಾನೂನು ಕ್ರಮ

Webdunia
ಶುಕ್ರವಾರ, 7 ಜನವರಿ 2022 (20:17 IST)
ಬೆಂಗಳೂರು ನಗರದಲ್ಲಿ ಇಂದು ರಾತ್ರಿ 10 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದ್ದು, ಈ ವೇಳೆ ಅನಗತ್ಯ ಓಡಾಡುವುದು ಕಂಡು ಬಂದರೆ ಕಠಿಣ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್​ ಪಂತ್​ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಾರಾಂತ್ಯ ಕರ್ಫ್ಯೂ ವೇಳೆ ಸರ್ಕಾರದ ಆದೇಶವನ್ನು ಎಲ್ಲರೂ ಗೌರವಿಸಬೇಕು. ಅಗತ್ಯ ವಸ್ತುಗಳ‌ ಖರೀದಿ ನೆಪದಲ್ಲಿ ಅನಗತ್ಯ ಓಡಾಡುವುದು ಸರಿಯಲ್ಲ ಎಂದರು.
ವಾಣಿಜ್ಯ ಮಳಿಗೆ ಮಾಲೀಕರು ನಿಯಮ ಉಲ್ಲಂಘಿಸುವುದು ಕಂಡು ಬಂದರೆ ಕ್ರಮಕೈಗೊಳ್ಳುತ್ತೇವೆ. ತುರ್ತು ಪ್ರಯಾಣ ಹಾಗೂ ಅನುಮತಿ ನೀಡಲಾಗಿರುವ ಸೇವೆ ಹೊರತುಪಡಿಸಿದರೆ ಬೇರೆ ಯಾವ ವಾಹನಗಳು ಸುಖಾಸುಮ್ಮನೆ‌ ಓಡಾಡುವುದು ಕಂಡು ಬಂದರೆ, ವಾಹನಗಳನ್ನು ಜಪ್ತಿ ಮಾಡುತ್ತೇವೆ. ಅಲ್ಲಲ್ಲಿ ಪೊಲೀಸರು ತಪಾಸಣೆ ಮಾಡಲಿದ್ದಾರೆ ಎಂದು ಪೊಲೀಸ್​ ಆಯುಕ್ತರು ತಿಳಿಸಿದ್ದಾರೆ.
ಈ ವೇಳೆ ಯಾವುದೇ ಕಾನೂನು ಉಲ್ಲಂಘನೆಗೆ ಅವಕಾಶವಿಲ್ಲ. ಈ ಬಾರಿ ಯಾವುದೇ ಪಾಸ್​ಗಳನ್ನು ನೀಡಲಾಗುವುದಿಲ್ಲ. ತಮ್ಮ ಐಡೆಂಟಿಟಿ ಕಾರ್ಡ್, ಪ್ರಯಾಣದ ಟಿಕೆಟ್​ಗಳು ಸೇರಿ ಸೂಕ್ತವಾದ ದಾಖಲೆ ನೀಡಿದರೆ ಮಾತ್ರ ಓಡಾಡುವುದಕ್ಕೆ ಅನುಮತಿ ನೀಡಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಪ್ತಾಪ್ತೆ ಮೇಲೆ ನಿರಂತರ ರೇಪ್ ಮಾಡಿ, ಗರ್ಭಪಾತ: ಪುತ್ತೂರಿನ 7 ವರ್ಷಗಳ ಹಿಂದಿನ ಪ್ರಕರಣಕ್ಕೆ ತೀರ್ಪು ಪ್ರಕಟ

ಮತಗಳ್ಳತನ: ರಾಹುಲ್ ನೇತೃತ್ವದಲ್ಲಿ ಆ.5 ರಂದು ಪ್ರತಿಭಟನೆ, ಡಿಕೆ ಶಿವಕುಮಾರ್

ತಮಿಳುನಾಡು ಬಿಜೆಪಿ ಉಪಾಧ್ಯಕ್ಷೆತಾಗಿ ನಟಿ ಖುಷ್ಬು ಸುಂದರ್‌ ಜವಾಬ್ದಾರಿ

ಆರಾಮಾಗಿ ನಡೆದುಕೊಂಡು ಹೋಗುತ್ತಿರುವಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿನಿ ಸೂಸೈಡ್‌, ಭಯಾನಕ ವಿಡಿಯೋ

ಅಕ್ಟೋಬರ್‌ನಲ್ಲಿ ಸಿಎಂ ಬದಲಾವಣೆ ಪಕ್ಕಾ, ಖರ್ಗೆ ಸರಿಯಾದ ಸಮಯಕ್ಕೆ ಕಲ್ಲು ಹೊಡೆದಿದ್ದಾರೆ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments