Webdunia - Bharat's app for daily news and videos

Install App

ವಾರಾಂತ್ಯ ಕರ್ಫ್ಯೂ ಮುಖ್ಯಮಂತ್ರಿಯೊಬ್ಬರ ತೀರ್ಮಾನವಲ್ಲ: ಸಚಿವ ಎಸ್.ಟಿ.ಸೋಮಶೇಖರ್

Webdunia
ಗುರುವಾರ, 20 ಜನವರಿ 2022 (21:04 IST)
ವಾರಾಂತ್ಯ ಕರ್ಫ್ಯೂ ಮುಖ್ಯಮಂತ್ರಿಯೊಬ್ಬರ ತೀರ್ಮಾನವಲ್ಲ. ತಜ್ಞರು ನೀಡಿದ ಮುನ್ನೆಚ್ಚರಿಕೆ, ಸಂಪುಟದ ಸಚಿವರ ತೀರ್ಮಾನದ ಬಳಿಕ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದೆಯೇ ವಿನಃ ಮುಖ್ಯಮಂತ್ರಿಗಳೊಬ್ಬರೇ ಕೈಗೊಂಡ ತೀರ್ಮಾನವಲ್ಲ ಎಂದು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜನರ ಆರೋಗ್ಯದ ದೃಷ್ಟಿಯಿಂದ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ವಾರಾಂತ್ಯ ಕರ್ಫ್ಯೂ ಮುಂದುವರಿಸುವ ಸಂಬಂಧ ಮುಖ್ಯಮಂತ್ರಿಗಳು ಶುಕ್ರವಾರ ನಿರ್ಧಾರ ಕೈಗೊಳ್ಳಲಿದ್ದಾರೆ. ಈ ಕುರಿತು ಸಾರ್ವಜನಿಕರಿಂದ ಅಹವಾಲನ್ನು ಕೂಡ ಸ್ವೀಕರಿಸುತ್ತಿದ್ದಾರೆ ಎಂದರು.
ಪ್ರತಾಪ್ ಸಿಂಹ, ಸಿ.ಟಿ.ರವಿ ಅವರು ಸಾರ್ವಜನಿಕರ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ತಜ್ಞರು ನೀಡಿದ ವರದಿ ಆಧಾರದ ಮೇಲೆ ಸರ್ಕಾರ ನಿರ್ಧಾರ ಕೈಗೊಂಡಿದೆ. ಜೊತೆಗೆ ಆಯಾ ಜಿಲ್ಲೆಯ ಪರಿಸ್ಥಿತಿ ನೋಡಿ ಆಯಾ ಜಿಲ್ಲಾಧಿಕಾರಿಗಳಿಗೆ ನಿರ್ಧಾರ ಕೈಗೊಳ್ಳುವ ಅಧಿಕಾರ ನೀಡಲಾಗಿದೆ ಎಂದು ಹೇಳಿದರು.
ಕೋವಿಡ್ ವಿಚಾರವಾಗಿ ಕೆಲವರು ಮಾತ್ರ ಹೇಳಿಕೆ ನೀಡಬೇಕು ಎಂಬ ಸಚಿವ ಸುಧಾಕರ್ ಹೇಳಿಕೆ ಕುರಿತ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಒಬ್ಬೊಬ್ಬರು ಒಂದೊಂದು ಹೇಳಿಕೆ ನೀಡಿದರೆ ಜನರಿಗೆ ಗೊಂದಲ ಉಂಟಾಗುತ್ತದೆ. ಸಂಪೂರ್ಣ ಜ್ಞಾನ ಹೊಂದಿದವರು ಮಾತನಾಡಿದರೆ ಸೂಕ್ತ ಎಂಬ ದೃಷ್ಟಿಯಿಂದ ಹೇಳಿಕೆ ನೀಡಿದ್ದಾರೆ ಅಷ್ಟೇ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡೇಟಾ ನೆಟ್‌ವರ್ಕ್‌ ಸ್ಥಗಿತ: ಮುಂಬೈ ವಿಮಾನ ಹಾರಾಟದಲ್ಲಿ ಕೆಲ ವ್ಯತ್ಯ‌ಯ

ರಾಹುಲ್ ಭಾಷಣ ಶಿವಕಾಶಿಯಿಂದ ತಂದು ಮಳೆಯಲ್ಲಿ ನೆನೆದ ಟುಸ್ ಪಟಾಕಿ: ಸುರೇಶ್ ಕುಮಾರ್ ವ್ಯಂಗ್ಯ

ನಾಳೆ ರಾಜ್ಯಕ್ಕೆ ಮೋದಿ, ಹೇಗಿರಲಿದೆ ಗೊತ್ತಾ ಪ್ರಧಾನಿ ವೇಳಾಪಟ್ಟಿ

2ತಿಂಗ್ಳ ಬಳಿಕ ಮತ್ತೇ ಸಮುದ್ರಕ್ಕಿಳಿದ ಬೋಟ್‌ಗಳು, ವಾರದ ನಂತರ ಮೀನಿನ ಬೆಲೆಯಲ್ಲಿ ಇಳಿಕೆ ಸಾಧ್ಯತೆ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments