Webdunia - Bharat's app for daily news and videos

Install App

ಮಂಗಳೂರಲ್ಲಿ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ಪರಿಶೀಲನೆ

Webdunia
ಸೋಮವಾರ, 6 ಸೆಪ್ಟಂಬರ್ 2021 (20:41 IST)
ಮಂಗಳೂರಲ್ಲಿ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂವನ್ನು ಮರು ಪರಿಶೀಲಿಸುವಂತೆ ಶಾಸಕ ಯುಟಿ ಖಾದರ್ ಒತ್ತಾಯಿಸಿದ್ದಾರೆ. ಮಂಗಳೂರು ನಗರದ ಸರ್ಕ್ಯೂಟ್ ಹೌಸ್ ನಲ್ಲಿ  ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ವಾರಾಂತ್ಯ ಕರ್ಫ್ಯೂವಿನ ಹಿಂದಿನ ತರ್ಕ ಏನೆಂದು ಅರ್ಥವಾಗುತ್ತಿಲ್ಲ. ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಅಂಗಡಿ ತೆರೆಯಲು ಅವಕಾಶ ನೀಡಲಾಗಿದೆ. ಆದರೆ ಪಾದರಕ್ಷೆ, ಜವಳಿ ಮುಂತಾದ ಇತರ ಅಂಗಡಿಗಳಿಗೆ ಏಕೆ ಅನುಮತಿ ಇಲ್ಲ. ಜಿಲ್ಲಾಡಳಿತವು ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ಅನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿದರು. ರಾತ್ರಿಯ ಸಮಯದಲ್ಲಿ ಸಾಮಾಜಿಕ ಕೂಟಗಳನ್ನು ತಪ್ಪಿಸಲು ರಾತ್ರಿ ಕರ್ಫ್ಯೂ ವಿಧಿಸುವುದು ಉತ್ತಮ. ಆದರೆ ವಿಕೇಂಡ್ ಕರ್ಪ್ಯೂವಿನಿಂದ ಯಾವುದೇ ಪ್ರಯೋಜನವಿಲ್ಲ. ವಿಕೇಂಡ್ ಕರ್ಪ್ಯೂ ಇರೋ ಕಾರಣ ಜನರು ವಿಕೇಂಡ್ ಬದಲು ಶುಕ್ರವಾರ ಅಥವಾ ಸೋಮವಾರದಂದು ಕಾರ್ಯಕ್ರಮಗಳನ್ನು ಆಯೋಜಿಸುತ್ತಾರೆ ಎಂದರು.
ಇನ್ನು ಟಾಸ್ಕ್ ಫೋರ್ಸ್ ಸಮಿತಿಯಲ್ಲಿರುವ ನಮ್ಮ ಶಾಸಕರೇ ಮುಖ್ಯಮಂತ್ರಿಗೆ ವಾರಾಂತ್ಯ ಕರ್ಫ್ಯೂ ಹಿಂಪಡೆಯಲು ಮನವಿ ಪತ್ರವನ್ನು ಸಲ್ಲಿಸುತ್ತಾರೆ. ಶಾಸಕರು ಮುಖ್ಯಮಂತ್ರಿಗೆ ಮನವಿ ಸಲ್ಲಿಸುವ ಮೂಲಕ ಜನರನ್ನು ಸಮಾಧಾನಪಡಿಸಲು ಮತ್ತು ಗೊಂದಲ ಸೃಷ್ಟಿಸಲು ಬಯಸುತ್ತಾರೆ ಎಂದು ಆರೋಪಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Kerala Rains: ಕಾಸರಗೋಡಿನಲ್ಲಿ ವಿಪರೀತ ಮಳೆ, ಮಧೂರು ದೇವಾಲಯದೊಳಗೇ ನುಗ್ಗಿದ ನೀರು

KSRTC Tour package: ಹೊಸ ಟೂರ್ ಪ್ಯಾಕೇಜ್, ಕಡಿಮೆ ದರದಲ್ಲಿ ಮೂರು ಸ್ಥಳಗಳಿಗೆ ಟೂರ್, ವಿವರ ಇಲ್ಲಿದೆ

ಯುಪಿಎ ಕಾಲದಲ್ಲಿಆರು ಬಾರಿ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದೆವು ಎಂದ ರಣದೀಪ್ ಸುರ್ಜೇವಾಲಾ

Bantwal Murder: ಮುಸ್ಲಿಮರ ಆಕ್ರೋಶಕ್ಕೆ ಬೆಚ್ಚಿದ ಸರ್ಕಾರ, ರಾಜ್ಯಕ್ಕೆ ಹೊಸ ಹೋಂ ಮಿನಿಸ್ಟರ್ ಬರ್ತಾರಾ

ಮುಂದಿನ ಸುದ್ದಿ
Show comments