Webdunia - Bharat's app for daily news and videos

Install App

‘ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಮಾಡಲಾಗುತ್ತೆ-ಸಿಎಂ ಬೊಮ್ಮಾಯಿ

Webdunia
ಶನಿವಾರ, 17 ಸೆಪ್ಟಂಬರ್ 2022 (20:30 IST)
ಇಂದು ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಕಲಬುರಗಿಗೆ ಪ್ರಯಾಣ ಬೆಳೆಸಿದ್ರು. ಸರ್ಧಾರ್ ವಲ್ಲಭಭಾಯ್ ಪಟೇಲ್ ಪುತ್ಥಳಿಗೆ  ಮಾಲಾರ್ಪಣೆ ಮಾಡಿದ್ರು. ಕಲಬುರಗಿ ನಗರದ DAR ಪೊಲೀಸ್ ಮೈದಾನದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನಂತರ ವಿವಿಧ ಪೊಲೀಸ್ ತುಕಡಿಗಳಿಂದ ಸಿಎಂಗೆ ಗೌರವ ವಂದನೆ ಸಲ್ಲಿಸಲಾಯಿತು. ಕಲ್ಯಾಣ ಕರ್ನಾಟಕ ಸ್ವಾತಂತ್ರ್ಯ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ‌ ಮಾತನಾಡಿದ್ದು, ಬಜೆಟ್‌ನಲ್ಲಿ KKRDBಗೆ 3000 ಕೋಟಿ ರೂ ಮೀಸಲು ಇಡಲಾಗಿದೆ. ಈಗಾಗಲೇ  KKRDBಗೆ 1500 ಕೋಟಿ ರೂ ನೀಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಎಲ್ಲಾ ಜಿಲ್ಲೆಗಳ ಅಭಿವೃದ್ಧಿಗೆ ಸರ್ಕಾರ ಬದ್ದವಾಗಿದೆ ಎಂದು ತಿಳಿಸಿದ್ರು. ನಮ್ಮದು ಕ್ರಿಯಾಶೀಲವಾಗಿರೋ ಸರ್ಕಾರ, ಪ್ರಾದೇಶಿಕ ಅಸಮತೋಲನ ನಿವಾರಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ‌ ಜಿಲ್ಲೆಗಳಲ್ಲಿ 2001 ಶಾಲಾ ಕೋಣೆಗಳ ನಿರ್ಮಾಣ ಮಾಡುವ ಗುರಿ ಹೊಂದಲಾಗಿದೆ. ಈ ಭಾಗದ ಸಮಗ್ರ ಕೈಗಾರಿಕಾ ಅಭಿವೃದ್ಧಿಗೆ ಕೈಗಾರಿಕೆ ನೀತಿ ತರಲಾಗಿದೆ ಎಂದು ತಿಳಿಸಿದ್ರು. ರಾಯಚೂರು ಹಾಗೂ ವಿಜಯಪುರ ಜಿಲ್ಲೆಯಲ್ಲಿ ಟೆಕ್ಸ್ಟ್‌ಟೈಲ್ ಪಾರ್ಕ್ ನಿರ್ಮಾಣ ಮಾಡಲಾಗ್ತಿದೆ. ಎರಡು ಟೆಕ್ಸ್ಟ್‌ಟೈಲ್ ಪಾರ್ಕ್‌ನಲ್ಲಿ 25 ಸಾವಿರ ಜನರಿಗೆ ಉದ್ಯೋಗ ಸಿಗಲಿದೆ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments