Webdunia - Bharat's app for daily news and videos

Install App

ಹಣ ದುಪ್ಪಟ್ಟು ಮಾಡೋ ದಂಧೆಕೋರರಿಗೆ ಏನಾಯ್ತು?

Webdunia
ಶುಕ್ರವಾರ, 17 ಮೇ 2019 (12:29 IST)
ಮುಂಬೈನಿಂದ ಬಂದ ತಂಡವೊಂದು ಹಣ ದುಪ್ಪಟ್ಟು ಮಾಡುವ ದಂಧೆಯಲ್ಲಿ ತೊಡಗಿದ್ದು, ಅವರಲ್ಲಿ ಓರ್ವ ಫೈರಿಂಗ್ ಗೆ ಬಲಿಯಾಗಿದ್ದಾನೆ.

ಮೈಸೂರಿನಲ್ಲಿ ಸಕ್ರಿಯವಾಗಿರುವ ಹಣ ದುಪ್ಪಟ್ಟು ಮಾಡುವ ದಂಧೆಕೋರರ ಕುರಿತು ಖಚಿತ ಮಾಹಿತಿ ಪಡೆದು ಸ್ಥಳಕ್ಕೆ ಭೇಟಿ ನೀಡಿದ್ದರು ಪೊಲೀಸರು. ಆದರೆ ಪೊಲೀಸರ ಮೇಲೆಯೇ ದುಷ್ಕರ್ಮಿಗಳು ಫೈರಿಂಗ್ ನಡೆಸಲು ಹೋಗಿ ಅವರಲ್ಲಿ ಓರ್ವನ ಮೇಲೆ ಅಚಾನಕ್ ಆಗಿ ಗುಂಡು ಹಾರಿದೆ. ಆತ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಣ ದುಪ್ಪಟ್ಟು ಮಾಡುವ ದಂಧೆಯೊಂದು ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ವಿಜಯ ನಗರ ಠಾಣಾ ಇನ್ಸಪೆಕ್ಟರ್ ಕುಮಾರ್ ಅವರು ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ್ದರು. ಸ್ಥಳಕ್ಕೆ ಕುಮಾರ್ ಅವರು ತೆರಳುತ್ತಿದ್ದಂತೆ ಮೂರು ಮಂದಿ ಅಲ್ಲಿಂದ ಪರಾರಿಯಾಗಿದ್ದು, ಓರ್ವ ಸಿಕ್ಕಿಹಾಕಿಕೊಂಡಿದ್ದ. ಸಿಕ್ಕಿ ಕೊಂಡ ವ್ಯಕ್ತಿ ಸಿನಿಮೀಯ ರೀತಿಯಲ್ಲಿ ಇನ್ಸಪೆಕ್ಟರ್ ಬಳಿ ಇರುವ ಗನ್ ಕಸಿದು ಅವರ ಮೇಲೆಯೇ ಫೈರಿಂಗ್ ಮಾಡಲು ಮುಂದಾಗಿದ್ದ. ಆದರೆ ಅಚಾನಕ್ ಆಗಿ ಗುಂಡು ಅವನಿಗೆ ಸಿಡಿದಿದೆ.

ಇದರಿಂದ ತೀವ್ರವಾಗಿ ಗಾಯಗೊಂಡಿದ್ದ ಅತನನ್ನು ಕೆ.ಆರ್.ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಯಿತಾದರೂ ಆತ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಆದರೆ ಅವರೆಲ್ಲ ಯಾರು, ಸತ್ತವನು ಎಲ್ಲಿಯವನು ಎಂಬುದರ ಕುರಿತು ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೌಜನ್ಯ ಘಟನೆ ನಡೆದಾಗ ನಿಮ್ಮ ಸರ್ಕಾರವೇ ಇದ್ದಿದ್ದು: ಬಿವೈ ವಿಜಯೇಂದ್ರಗೆ ನೆಟ್ಟಿಗರ ತರಾಟೆ

ದಿವಾನ್ ಮಿರ್ಜಾ ಇಸ್ಮಾಯಿಲ್ ಮಹಾರಾಜರನ್ನು ಮೆರವಣಿಗೆ ಮಾಡಿಸ್ತಿದ್ರು: ಸಿದ್ದರಾಮಯ್ಯ

ಸೌಜನ್ಯ ಪ್ರಕರಣದಲ್ಲಿ ಮರುತನಿಖೆ ಬೇಕಾದ್ರೆ ಕೋರ್ಟ್ ಗೆ ಹೋಗಲಿ: ಸಿಎಂ ಸಿದ್ದರಾಮಯ್ಯ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಸರ್ವಕಾಲಿಕ ದಾಖಲೆ ಬರೆದ ಚಿನ್ನದ ಬೆಲೆ

ಮುಂದಿನ ಸುದ್ದಿ
Show comments