Webdunia - Bharat's app for daily news and videos

Install App

ಬೆಟ್ಟದ ಮೇಲೆ ಕಾಣಬಾರದ್ದು ಕಂಡಾಗ ಏನಾಯ್ತು?

Webdunia
ಶನಿವಾರ, 24 ಆಗಸ್ಟ್ 2019 (17:12 IST)
ಬೆಟ್ಟದ ಮೇಲೆ ಪ್ರತ್ಯಕ್ಷವಾಗಿರೋ ಅದನ್ನು ಕಂಡಿರೋ ಜನರು ಹಗಲು, ರಾತ್ರಿ ಜೀವ ಭಯದಲ್ಲಿ ಕಾಲ ಕಳೆಯುವಂತಾಗಿದೆ.  

ಕಳೆದ ಎಂಟು ದಿನಗಳ ಹಿಂದೆ ಬೆಟ್ಟದ ಮೇಲೆ ಪ್ರತ್ಯಕ್ಷವಾಗಿದ್ದ ಚಿರತೆಯೊಂದು, ಇದೀಗ ಏಕಾಏಕಿ ಗ್ರಾಮದಲ್ಲಿ ಕಂಡು ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪರಪೇಟೆ ಗ್ರಾಮದ ಜನರ ನಿದ್ದೆ ಗೆಡಿಸಿದೆ.

ಕಳೆದ‌ ಎಂಟು ದಿನಗಳಿಂದ ಚಿರತೆಯೊಂದು ಪ್ರತ್ಯಕ್ಷವಾಗಿ ಗ್ರಾಮಸ್ಥರಿಗೆ ಹಾಗೂ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನಿಸುತ್ತಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪರಪೇಟೆ ಗ್ರಾಮದ ಬಳಿ ಕಂಡು ಬಂದಿದೆ. ಬೆಟ್ಟದ ಮೇಲೆ ಪ್ರತ್ಯಕ್ಷವಾದ ಚಿರತೆ ಏಕಾಏಕಿ ಗ್ರಾಮದಲ್ಲಿ ಕಂಡು ಬಂದಿದ್ದು, ಗ್ರಾಮಸ್ಥರ ನಿದ್ದೆಯನ್ನು ಕೆಡಿಸಿದೆ. ಈಗಾಗಲೇ ಮೇಕೆಯೊಂದನ್ನು ಕೊಂದು ಪರಾರಿಯಾದ ಚಿರತೆಯನ್ನು ಹಿಡಿಯಲು ಗ್ರಾಮಸ್ಥರು ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.

ಚಿರತೆಯನ್ನು ಬಂಧಿಸಲು ಬೋನ್ ಗಳನ್ನು ಏರ್ಪಡಿಸಿ, ಅದರೊಳಗೆ ನಾಯಿ ಹಾಗೂ ಮೇಕೆಗಳನ್ನು ಇಡಲಾಗಿದೆ. ಬೆಟ್ಟದ ಮೇಲೆ ಕಂಡ ಚಿರತೆ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದು, ಸದ್ಯ ಗ್ರಾಮಕ್ಕೆ ಎಂಟ್ರಿ ಕೊಟ್ಟ ಚಿರತೆಯಿಂದ ಗ್ರಾಮಸ್ಥರು ಸೇರಿದಂತೆ ಸುತ್ತಮತ್ತಲಿನ ಗ್ರಾಮಗಳಲ್ಲಿನ ಜನತೆ ಮನೆಯಿಂದ ಹೊರಬರಲು ಭಯಭೀತರಾಗಿದ್ದಾರೆ.  ಬೋನಿನಲ್ಲಿ ಚಿರತೆ ಸೆರೆಯಾದ್ರೆ ಸಾಕಪ್ಪ ಎಂದು‌ ನಿಟ್ಟು ಉಸಿರು ಬಿಡುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments