Webdunia - Bharat's app for daily news and videos

Install App

ಬೆಟ್ಟದ ಮೇಲೆ ಕಾಣಬಾರದ್ದು ಕಂಡಾಗ ಏನಾಯ್ತು?

Webdunia
ಶನಿವಾರ, 24 ಆಗಸ್ಟ್ 2019 (17:12 IST)
ಬೆಟ್ಟದ ಮೇಲೆ ಪ್ರತ್ಯಕ್ಷವಾಗಿರೋ ಅದನ್ನು ಕಂಡಿರೋ ಜನರು ಹಗಲು, ರಾತ್ರಿ ಜೀವ ಭಯದಲ್ಲಿ ಕಾಲ ಕಳೆಯುವಂತಾಗಿದೆ.  

ಕಳೆದ ಎಂಟು ದಿನಗಳ ಹಿಂದೆ ಬೆಟ್ಟದ ಮೇಲೆ ಪ್ರತ್ಯಕ್ಷವಾಗಿದ್ದ ಚಿರತೆಯೊಂದು, ಇದೀಗ ಏಕಾಏಕಿ ಗ್ರಾಮದಲ್ಲಿ ಕಂಡು ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪರಪೇಟೆ ಗ್ರಾಮದ ಜನರ ನಿದ್ದೆ ಗೆಡಿಸಿದೆ.

ಕಳೆದ‌ ಎಂಟು ದಿನಗಳಿಂದ ಚಿರತೆಯೊಂದು ಪ್ರತ್ಯಕ್ಷವಾಗಿ ಗ್ರಾಮಸ್ಥರಿಗೆ ಹಾಗೂ ಅಧಿಕಾರಿಗಳಿಗೆ ಚಳ್ಳೆ ಹಣ್ಣು ತಿನಿಸುತ್ತಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಉಪ್ಪರಪೇಟೆ ಗ್ರಾಮದ ಬಳಿ ಕಂಡು ಬಂದಿದೆ. ಬೆಟ್ಟದ ಮೇಲೆ ಪ್ರತ್ಯಕ್ಷವಾದ ಚಿರತೆ ಏಕಾಏಕಿ ಗ್ರಾಮದಲ್ಲಿ ಕಂಡು ಬಂದಿದ್ದು, ಗ್ರಾಮಸ್ಥರ ನಿದ್ದೆಯನ್ನು ಕೆಡಿಸಿದೆ. ಈಗಾಗಲೇ ಮೇಕೆಯೊಂದನ್ನು ಕೊಂದು ಪರಾರಿಯಾದ ಚಿರತೆಯನ್ನು ಹಿಡಿಯಲು ಗ್ರಾಮಸ್ಥರು ಸೇರಿದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ.

ಚಿರತೆಯನ್ನು ಬಂಧಿಸಲು ಬೋನ್ ಗಳನ್ನು ಏರ್ಪಡಿಸಿ, ಅದರೊಳಗೆ ನಾಯಿ ಹಾಗೂ ಮೇಕೆಗಳನ್ನು ಇಡಲಾಗಿದೆ. ಬೆಟ್ಟದ ಮೇಲೆ ಕಂಡ ಚಿರತೆ ಗ್ರಾಮದಲ್ಲಿ ಪ್ರತ್ಯಕ್ಷವಾಗಿದ್ದು, ಸದ್ಯ ಗ್ರಾಮಕ್ಕೆ ಎಂಟ್ರಿ ಕೊಟ್ಟ ಚಿರತೆಯಿಂದ ಗ್ರಾಮಸ್ಥರು ಸೇರಿದಂತೆ ಸುತ್ತಮತ್ತಲಿನ ಗ್ರಾಮಗಳಲ್ಲಿನ ಜನತೆ ಮನೆಯಿಂದ ಹೊರಬರಲು ಭಯಭೀತರಾಗಿದ್ದಾರೆ.  ಬೋನಿನಲ್ಲಿ ಚಿರತೆ ಸೆರೆಯಾದ್ರೆ ಸಾಕಪ್ಪ ಎಂದು‌ ನಿಟ್ಟು ಉಸಿರು ಬಿಡುತ್ತಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments