Select Your Language

Notifications

webdunia
webdunia
webdunia
webdunia

ಲಸಿಕೆ ಪಡೆಯುವಲ್ಲಿ ಜನರ ಉತ್ಸಾಹದ ಕಾರಣವಾದ್ರು ಏನು?

ಲಸಿಕೆ ಪಡೆಯುವಲ್ಲಿ ಜನರ ಉತ್ಸಾಹದ ಕಾರಣವಾದ್ರು ಏನು?
ಬೆಂಗಳೂರು , ಬುಧವಾರ, 8 ಡಿಸೆಂಬರ್ 2021 (10:59 IST)
ಬೆಂಗಳೂರು : ಜನರು ತುಂಬಾನೇ ಉತ್ಸಾಹದಿಂದ ಕೊರೊನಾ ಲಸಿಕೆ ಹಾಕಿಸಿಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಸಚಿವ ಕೆ. ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಸಿಕೆ ಡ್ರೈವ್ ಇಂದು ಕೂಡ ಮಾಡ್ತಿದ್ದೇವೆ. 7 ಕೋಟಿ 80 ಲಕ್ಷ ಡೋಸ್ ಲಸಿಕೆ ಕೊಡಲಾಗಿದೆ. ಶೇ.68 ಎರಡು ಡೋಸ್ ಪಡೆದವರ ಸಂಖ್ಯೆ ಆಗಿದೆ. ಜನರು ಉತ್ಸಾಹದಿಂದ ಲಸಿಕೆ ಹಾಕಿಸಿಕೊಳ್ತಿದ್ದಾರೆ. ಕರ್ನಾಟಕ ರಾಜ್ಯದ ಕ್ರಮ ಸರಿಯಾಗಿದೆ ಅಂತ ಕೇಂದ್ರ ಹೇಳಿದೆ.
 ಬೇರೆ ರಾಜ್ಯ ಕೂಡ ಇದನ್ನ ಪಾಲನೆ ಮಾಡಿ ಅಂತ ಹೇಳಿದೆ. ಯಾರು ಕೂಡ ಉದಾಸೀನ ಮಾಡಬಾರದು. ಹೊಸ ತಳಿ ಆಗಿರೋದ್ರಿಂದ ಮೃದು ಲಕ್ಷಣ ಕಾಣ್ತಿದೆ. ಹೀಗಾಗಿ ಮುನ್ನೆಚ್ಚರಿಕೆ ಕ್ರಮ ನಾವು ತಗೋಬೇಕು ಎಂದು ಹೇಳಿದರು.
ಇದೇ ವೇಳೆ ಕ್ರಿಸ್ ಮಸ್ ಮತ್ತು ಹೊಸ ವರ್ಷಕ್ಕೆ ಟಫ್ ರೂಲ್ಸ್ ಜಾರಿಗೆ ತರುವ ವಿಚಾರದ ಕುರಿತು ಪ್ರತಿಕ್ರಿಯಿಸಿ, ಈ ಬಗ್ಗೆ ಸಿಎಂ ಚರ್ಚೆ ಮಾಡ್ತಿದ್ದಾರೆ. ಆದಷ್ಟು ಬೇಗ ಸಿಎಂ ಈ ಬಗ್ಗೆ ನಿರ್ಧಾರ ಮಾಡ್ತಾರೆ. ನಾಳೆಯ ಸಭೆಯಲ್ಲೂ ಟಫ್ ರೂಲ್ಸ್ ಬಗ್ಗೆ ಚರ್ಚೆ ಆಗುತ್ತೆ ಎಂದು ತಿಳಿಸಿದರು.
ರಾಷ್ಟ್ರೀಯ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿ ಕೂಡಾ ರಾಜ್ಯದ ಕ್ರಮಗಳನ್ನ ಮೆಚ್ಚಿಕೊಂಡಿದೆ. ಬೇರೆ ರಾಜ್ಯಗಳು ಕರ್ನಾಟಕ ಮಾದರಿ ಪಾಲನೆ ಮಾಡಿ ಅಂತ ಹೇಳಿದ್ದಾರೆ. ಹೀಗಾಗಿ ನಾವು ನಮ್ಮ ಕ್ರಮಗಳನ್ನು ಮುಂದುವರೆಸುತ್ತೇವೆ ಎಂದು ವಿವರಿಸಿದರು.


Share this Story:

Follow Webdunia kannada

ಮುಂದಿನ ಸುದ್ದಿ

ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ರೂಲ್ಸ್ ಬ್ರೇಕ್