Select Your Language

Notifications

webdunia
webdunia
webdunia
webdunia

ರಾಹುಲ್ ಗಾಂಧಿ ಮದುವೆ ವಿಚಾರ: ಸಿಎಂ ಸಿದ್ದು, ಡಿಕೆಶಿ ಹೇಳಿದ್ದೇನು?

ರಾಹುಲ್ ಗಾಂಧಿ ಮದುವೆ ವಿಚಾರ: ಸಿಎಂ ಸಿದ್ದು, ಡಿಕೆಶಿ ಹೇಳಿದ್ದೇನು?
ಬೆಂಗಳೂರು , ಬುಧವಾರ, 30 ಆಗಸ್ಟ್ 2017 (10:56 IST)
ಬೆಂಗಳೂರು: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಮದುವೆಯಾಗಲು ದಲಿತರ ಹೆಣ್ಣು ಮಗಳನ್ನು ನೀಡಲು ಸಿದ್ಧ ಎಂದಿದ್ದ ಗೋವಿಂದ ಕಾರಜೋಳ ಲೇವಡಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

 
ಕಾರಜೋಳ ಮೊದಲು ಸಿಎಂ ಸವಾಲಿಗೆ ಉತ್ತರಿಸಲಿ. ನಂತರ ರಾಹುಲ್ ಗಾಂಧಿ ಮದುವೆ ವಿಚಾರ ಮಾತನಾಡಲಿ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಇನ್ನೊಂದೆಡೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೆಹರೂ ಕುಟುಂಬದಲ್ಲಿ ಆಗಿರುವಷ್ಟು ಅಂತರ್ಜಾತಿ ವಿವಾಹ ಬೇರೆಲ್ಲೂ ಆಗಿಲ್ಲ. ಈ ವಿಚಾರದ ಬಗ್ಗೆ ಮಾತನಾಡಲು ಗೋವಿಂದ ಕಾರಜೋಳಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ದಲಿತರನ್ನು ಮನೆಗೆ ಕರೆಸಿ ಊಟ ಹಾಕಿಸಿದ್ದಕ್ಕೆ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದರ ವಿರುದ್ಧವಾಗಿ ಗೋವಿಂದ ಕಾರಜೋಳ ರಾಹುಲ್ ಗಾಂಧಿ ಮದುವೆ ವಿಚಾರವೆತ್ತಿ ಲೇವಡಿ ಮಾಡಿದ್ದರು.

ಇದನ್ನೂ ಓದಿ.. ಒಂದೇ ಗ್ಲೌಸ್ ನೊಳಗೆ ಕೈ ತೂರಿಸಲಿರುವ ಕಿಚ್ಚ ಸುದೀಪ್, ದರ್ಶನ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ರಾಹುಲ್ ಗಾಂಧಿ ತಪ್ಪು ಫೋಟೋ ಬಳಕೆ ಮಾಡಿ ಬಿಜೆಪಿ ಎಡವಟ್ಟು