Webdunia - Bharat's app for daily news and videos

Install App

ರಾಹುಲ್ ಗಾಂಧಿ ಮದುವೆ ವಿಚಾರ: ಸಿಎಂ ಸಿದ್ದು, ಡಿಕೆಶಿ ಹೇಳಿದ್ದೇನು?

Webdunia
ಬುಧವಾರ, 30 ಆಗಸ್ಟ್ 2017 (10:56 IST)
ಬೆಂಗಳೂರು: ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಮದುವೆಯಾಗಲು ದಲಿತರ ಹೆಣ್ಣು ಮಗಳನ್ನು ನೀಡಲು ಸಿದ್ಧ ಎಂದಿದ್ದ ಗೋವಿಂದ ಕಾರಜೋಳ ಲೇವಡಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

 
ಕಾರಜೋಳ ಮೊದಲು ಸಿಎಂ ಸವಾಲಿಗೆ ಉತ್ತರಿಸಲಿ. ನಂತರ ರಾಹುಲ್ ಗಾಂಧಿ ಮದುವೆ ವಿಚಾರ ಮಾತನಾಡಲಿ ಎಂದು ಇಂಧನ ಸಚಿವ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಇನ್ನೊಂದೆಡೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನೆಹರೂ ಕುಟುಂಬದಲ್ಲಿ ಆಗಿರುವಷ್ಟು ಅಂತರ್ಜಾತಿ ವಿವಾಹ ಬೇರೆಲ್ಲೂ ಆಗಿಲ್ಲ. ಈ ವಿಚಾರದ ಬಗ್ಗೆ ಮಾತನಾಡಲು ಗೋವಿಂದ ಕಾರಜೋಳಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ದಲಿತರನ್ನು ಮನೆಗೆ ಕರೆಸಿ ಊಟ ಹಾಕಿಸಿದ್ದಕ್ಕೆ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದರ ವಿರುದ್ಧವಾಗಿ ಗೋವಿಂದ ಕಾರಜೋಳ ರಾಹುಲ್ ಗಾಂಧಿ ಮದುವೆ ವಿಚಾರವೆತ್ತಿ ಲೇವಡಿ ಮಾಡಿದ್ದರು.

ಇದನ್ನೂ ಓದಿ.. ಒಂದೇ ಗ್ಲೌಸ್ ನೊಳಗೆ ಕೈ ತೂರಿಸಲಿರುವ ಕಿಚ್ಚ ಸುದೀಪ್, ದರ್ಶನ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments