Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷ ಸಂಸತ್ತಿನಲ್ಲಿ ಏನು ಮಾಡುತ್ತಿದೆ?: ಸಿಎಂಗೆ ಬಿಎಸ್‌ವೈ ಟಾಂಗ್

Webdunia
ಶುಕ್ರವಾರ, 17 ಮಾರ್ಚ್ 2017 (17:14 IST)
ವಿಧಾನಸಭೆ ಕಲಾಪವನ್ನು ಬಹಿಷ್ಕರಿಸಿ ಧರಣಿ ನಡೆಸುತ್ತಿರುವ ಬಿಜೆಪಿ ಶಾಸಕರನ್ನು ಬೆಂಬಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಕಾಂಗ್ರೆಸ್ ಪಕ್ಷ ಸಂಸತ್ತಿನಲ್ಲಿ ಏನು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯಗೆ ತಿರುಗೇಟು ನೀಡಿದರು.
 
ಕಲಾಪಕ್ಕೆ ಬಿಜೆಪಿ ನಾಯಕರು ಅಡ್ಡಿಯಾಗಿದ್ದಾರೆ ಎನ್ನುವ ಆರೋಪಗಳನ್ನು ತಳ್ಳಿಹಾಕಿದ ಅವರು, ಕಾಂಗ್ರೆಸ್ ಪಕ್ಷ ಸಂಸತ್ತಿನಲ್ಲಿ ಬೇಜವಾಬ್ದಾರಿ ತೋರುತ್ತಿಲ್ಲವೇ? ನವದೆಹಲಿಯಲ್ಲಿ ಕಲಾಪಕ್ಕೆ ಅಡ್ಡಿಪಡಿಸುವುದು ನ್ಯಾಯವೇ ಎಂದು ಕಿಡಿಕಾರಿದರು.
 
ಕಲಾಪದಲ್ಲಿ ಡೈರಿ ವಿಷಯ ಚರ್ಚೆಗೆ ಬಂದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅನೇಕ ಸಚಿವರ, ಶಾಸಕರ ಬಂಡವಾಳ ಬಯಲಾಗುತ್ತದೆ ಎನ್ನುವ ಆತಂಕದಿಂದ ಸರಕಾರ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
 
ವಿಧಾನಸಭೆ ಮತ್ತು ವಿಧಾನ ಪರಿಷತ್ ಕಲಾಪದಲ್ಲಿ ಡೈರಿ ವಿಷಯಕ್ಕೆ ಸಂಬಂಧಿಸಿದಂತೆ ಚರ್ಚೆಗೆ ಅವಕಾಶ ದೊರೆಯದಿರುವ ಹಿನ್ನೆಲೆಯಲ್ಲಿ, ಬಿಜೆಪಿ ಶಾಸಕರು ಧರಣಿಯನ್ನು ಮುಂದುವರಿಸಿದ್ದಾರೆ. ಅದರಲ್ಲೇನು ತಪ್ಪಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka weather: ಕರಾವಳಿ, ಮಲೆನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್‌

ಇರಾನ್‌ ಮೇಲೆ ಅಮೆರಿಕಾ ಏರ್‌ಸ್ಟ್ರೇಕ್: ಮತ್ತಷ್ಟು ದಾಳಿಯ ಎಚ್ಚರಿಕೆ ನೀಡಿದ ಡೋನಾಲ್ಡ್‌ ಟ್ರಂಪ್‌

ಇರಾನ್‌–ಇಸ್ರೇಲ್‌ ನಡುವಿನ ಸಂಘರ್ಷಕ್ಕೆ ದೊಡ್ಡಣ್ಣ ಎಂಟ್ರಿ: ಇರಾನ್ ಅಣುಸ್ಥಾವರಗಳ ಮೇಲೆ ಅಮೆರಿಕಾ ಏರ್‌ ಸ್ಟ್ರೈಕ್‌

ವಿಮಾನಗಳಲ್ಲಿ ಯಾಕೆ ಹೀಗಾಗುತ್ತಿದೆ, ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶವಾಯಿತು ಇಂಡಿಗೋ ವಿಮಾನ

ಯೋಗ ಜಗತ್ತನ್ನು ಒಂದುಗೂಡಿಸುತ್ತದೆ: ಪ್ರಧಾನಿ ನರೇಂದ್ರ ಮೋದಿ

ಮುಂದಿನ ಸುದ್ದಿ
Show comments