Webdunia - Bharat's app for daily news and videos

Install App

ಬಿಜೆಪಿ ಸಂಸದರ ಮಾತಿಗೆ ಮಹಿಳಾ ಅಧಿಕಾರಿ ಮಾಡಿದ್ದೇನು?

Webdunia
ಸೋಮವಾರ, 20 ಜುಲೈ 2020 (20:52 IST)
ಬಿಜೆಪಿ ಸಂಸದರ ಮಾತಿಗೆ ಮಹಿಳಾ ಅಧಿಕಾರಿ ತ್ವರಿತವಾಗಿ ಸ್ಪಂದನೆ ಮಾಡಿದ್ದಾರೆ.

ಇಎಸ್ಐಸಿ ಕಲಬುರಗಿಯಲ್ಲಿ ಕೋವಿಡ್ 19 ಟೆಸ್ಟಿಂಗ್ ಲ್ಯಾಬ್ ಕೇಂದ್ರವನ್ನು ಪ್ರಾರಂಭಿಸುವಲ್ಲಿನ ವಿಳಂಬದಿಂದಾಗಿ, ಸಂಸದ ಡಾ.ಉಮೇಶ್ ಜಾಧವ್ ಅವರು ನವದೆಹಲಿಯಲ್ಲಿ ಡಿಜಿ (ಉಸ್ತುವಾರಿ) ಇಎಸ್ಐಸಿ ಅನುರಾಧಾ ಪ್ರಸಾದ್ ಅವರನ್ನು ಭೇಟಿ ಮಾಡಿದ್ದರು.

ಇಎಸ್ಐಸಿ ಕಲಬುರಗಿಯಲ್ಲಿ COVID 19 ಪರೀಕ್ಷಾ ಕೇಂದ್ರವನ್ನು ಪ್ರಾರಂಭಿಸಲು ಉಪಕರಣಗಳು ಮತ್ತು ಅಗತ್ಯ ವಸ್ತುಗಳನ್ನು ಖರೀದಿಸುವ ಪ್ರಕ್ರಿಯೆಯನ್ನು ತ್ವರಿತಗೊಳಿಸಲು  ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶಿಸಲು ಕೋರಿದ್ದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಡಿಜಿ ಇಎಸ್ಐಸಿ ರವರು ಲ್ಯಾಬ್ ಬೇಗನೆ ಕೆಲಸ ಮಾಡಲು ಪ್ರಾರಂಭಿಸುತ್ತದೆ ಎಂದು ಭರವಸೆ ನೀಡಿದ್ದಾರೆ. ಇದಕ್ಕಾಗಿ ಈಗಾಗಲೇ ಅಗತ್ಯ ಹಣವನ್ನು ಕಲ್ಪಿಸಲಾಗಿದೆ ಎಂದಿದ್ದಾರೆ.

ಇನ್ನು ಕೆಲವೇ ದಿನಗಳಲ್ಲಿ 2 ನೇ ಪೂರ್ಣ ಪ್ರಮಾಣದ ಕೋವಿಡ್ 19 ಪರೀಕ್ಷಾ ಕೇಂದ್ರವು ಶೀಘ್ರದಲ್ಲೇ ಕಲಬುರಗಿ ಜಿಲ್ಲೆಯಲ್ಲಿ ಕೆಲಸ ಮಾಡಲು ಪ್ರಾರಂಭಿಸುತ್ತದೆ ಎಂದು ಸಂಸದ ಡಾ.ಉಮೇಶ್ ಜಾಧವ್ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments