ಪ್ರಣಾಳಿಕೆ ಘೋಷಣೆ ಮಾಡದ ನಟ ಉಪೇಂದ್ರ ಹೇಳಿದ್ದೇನು?

Webdunia
ಶನಿವಾರ, 30 ಮಾರ್ಚ್ 2019 (14:39 IST)
ನೈಜ ಪ್ರಜಾಪ್ರಭುತ್ವ ಆಡಳಿತ  ನೀಡುವ ಸಲುವಾಗಿ  ನಮ್ಮ ಪಕ್ಷ ಕಾಳಜಿ ವಹಿಸಲಿದೆ ಎಂದು ಉತ್ತಮ ಪ್ರಜಾಕೀಯ ಪಕ್ಷ (UPP)ದ ಸಂಸ್ಥಾಪಕ ಅಧ್ಯಕ್ಷ ಉಪೇಂದ್ರ ಹೇಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಪಕ್ಷದ ಅಭ್ಯರ್ಥಿಗಳನ್ನು ಸುದ್ದಿಗೋಷ್ಠಿಗೆ ಪರಿಚಯಿಸಿ ಮಾತನಾಡಿದ ಉಪೇಂದ್ರ, "ನಮ್ಮ ವಿಚಾರವೇ ಪ್ರಚಾರ, ನಾವು ಸೇವಕರಲ್ಲಾ, ಕಾರ್ಮಿಕರು. ಮತ ನೀಡಿ ಗೆಲುವು ಸಾಧಿಸಿದರೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತೇವೆ" ಎಂದರು.

ಪಕ್ಷ ಅಧಿಕಾರಕ್ಕೆ ಬಂದರೆ ಸಾರ್ವಜನಿಕರ ಕುಂದು ಕೊರತೆ, ನಿವಾರಿಸಿ ರಿಪೋರ್ಟ್ ಕಾರ್ಡ್ ನೀಡುವ ಕುರಿತು ಪತ್ರಿಕಾಗೋಷ್ಠಿ ಆರಂಭಕ್ಕೂ ಮುನ್ನ ಅಣಕು ಪ್ರದರ್ಶನ ನೀಡಿದರು.

ಷರತ್ತುಬದ್ಧ ಬಾಹ್ಯಬೆಂಬಲ: ರಾಜ್ಯದ ಸಮಸ್ಯೆಗಳನ್ನು ಪರಿಹರಿಸುವ ಹಾಗೂ ಜನರು ಬಯಸುವ ಸರ್ಕಾರಕ್ಕೆ ಉತ್ತಮ ಪ್ರಜಾ ಕೀಯ ಪಕ್ಷ ಷರತ್ತುಬದ್ಧ ಬೆಂಬಲ ನೀಡುತ್ತದೆ ಎಂದ ಉಪೇಂದ್ರ, ಆಟೋ ರಿಕ್ಷಾ ಗುರುತಿಗೆ ಮತ ನೀಡಿ.  ನಿಮ್ಮ ಸಮಸ್ಯೆಗಳು ಆಟೋಮ್ಯಾಟಿ ಕ್ ಆಗಿ ಬದಲಾಗುತ್ತದೆ ಎಂದು ಹೇಳಿದರು.

ಜನಸಾಮಾನ್ಯರ ಮುಖ್ಯಮಂತ್ರಿಯಾಗಬೇಕು: Pranalike ಯಲ್ಲಿ ನಮಗೆ ನಂಬಿಕೆ ಇಲ್ಲ. ಯಾವಾಗ ನ್ಯಾಯಾಲಯದ ಮುಂದೆ ಪ್ರಣಾಳಿಕೆ ಇಟ್ಟು ಅದನ್ನು ಈಡೇರಿಸದವರು ರಾಜೀನಾಮೆ ನೀಡುವ ವ್ಯವಸ್ಥೆ ಬಂದಲ್ಲಿ ಮಾತ್ರ ಪ್ರಣಾಳಿಕೆ ರೂಪಿಸುತ್ತೇನೆ.  ಜನ ಸಾಮಾನ್ಯರ ಮುಖ್ಯಮಂತ್ರಿಯಾಗಬೇಕು ಎಂಬ ಹಂಬಲ ನಮ್ಮದು ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಖಾಕಿ ಮೇಲೆ ಕೈ ಹಾಕಿದ ಮೂವರು ಮೂವರಿಗೆ 7 ವರ್ಷ ಜೈಲೇ ಗತಿ

ಸ್ಪರ್ಧಾತ್ಮಕ ಪರೀಕ್ಷೆಗೆ ಹೊರಟ್ಟಿದ್ದ ಯುವತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣು

ದೆಹಲಿ ವಾಯುಮಾಲಿನ್ಯ: ನಾಳೆ ಶಾಲೆಗೆ ರಜೆ ಘೋಷಣೆ, 50% ಮನೆಯಿಂದ ಕೆಲಸಕ್ಕೆ ಅನುಮತಿ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ಮುಂದಿನ ಸುದ್ದಿ
Show comments