Select Your Language

Notifications

webdunia
webdunia
webdunia
webdunia

ಕೊರೊನಾ ಪೀಡಿತ ಎಸ್ ಪಿ ಹೇಳಿದ್ದೇನು?

ಕೊರೊನಾ ಪೀಡಿತ ಎಸ್ ಪಿ ಹೇಳಿದ್ದೇನು?
ದಾವಣಗೆರೆ , ಶುಕ್ರವಾರ, 25 ಸೆಪ್ಟಂಬರ್ 2020 (11:52 IST)
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರಿಗೆ ಕೊರೊನಾ ದೃಢಪಟ್ಟಿದ್ದು, ಚಿಕಿತ್ಸೆ ಪಡೆದುಕೊಂಡು ಗುಣಮುಖರಾಗಿದ್ದಾರೆ.

ಕೊರೊನಾ ವಿರುದ್ಧ ಗೆಲುವು ಸಾಧಿಸಲು ಪ್ರತಿಯೊಬ್ಬರಿಗೂ ಆತ್ಮಸ್ಥೈರ್ಯವೇ ಮದ್ದು ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಹೇಳಿದ್ದಾರೆ.

ಸೋಂಕಿನಿಂದ ಬಾಧಿತರಾಗಿ ದಾವಣಗೆರೆ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ನಂತರ ಗುಣಮುಖರಾಗಿ ಇದೀಗ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡುತ್ತಿರುವ ಎಸ್ಪಿ ಹನುಮಂತರಾಯ ಅವರು, ಸೋಂಕಿನ ಕುರಿತು ಜನ ಜಾಗೃತಿ ಮೂಡಿಸುತ್ತಿದ್ದಾರೆ.

ಕೋವಿಡ್ ನಿಯಂತ್ರಣ ಕುರಿತ ಸರ್ಕಾರದ ಮಾರ್ಗಸೂಚಿಗಳನ್ನು ಪ್ರತಿಯೊಬ್ಬರು ಚಾಚೂ ತಪ್ಫದೇ ಪಾಲಿಸಬೇಕು, ದೈನಂದಿನ ಜೀವನದಲ್ಲಿ ವೈಯಕ್ತಿಕ ಸ್ವಚ್ಚತೆಗೆ  ಹೆಚ್ಚು ಗಮನ ನೀಡಬೇಕು. ರೋಗ ಲಕ್ಷಣಗಳು ಕಂಡು ಬಂದ ತಕ್ಷಣ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು. ಈ ಅಂಶಗಳು ಕೋವಿಡ್ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸಲಿವೆ  ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಹೆಂಡತಿ, ಅತ್ತೆ, ಅತ್ತಿಗೆಯನ್ನು ಕೊಂದು ಶವದೊಂದಿಗೆ ಮಾಡಿಬಿಟ್ಟ ಇಂಥ ನೀಚ ಕೆಲಸ