Publish Date: Mon, 31 May 2021 (09:51 IST)
Updated Date: Mon, 31 May 2021 (09:53 IST)
ಬೆಂಗಳೂರು : ಲಾಕ್ ಡೌನ್ ವಿಸ್ತರಣೆ ಮಾಡುವ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೂನ್ 7ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಅದು ಮುಗಿದ ಮೇಲೆ ವಿಸ್ತರಣೆ ಬಗ್ಗೆ ವಿಚಾರ ಮಾಡೋಣ. ಮಕ್ಕಳಿಗೆ ಕೊರೊನಾ ಸೋಂಕು ತಗಲಿರುವ ಬಗ್ಗೆ ಕೆಲವು ತಜ್ಞರು ಸರ್ಕಾರದ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಅದಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.