Select Your Language

Notifications

webdunia
webdunia
webdunia
webdunia

ದೊಡ್ಡವರ ವಿಚಾರವನ್ನು ನಾನು ಪ್ರಸ್ತಾಪ ಮಾಡಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದು ಯಾರ ಬಗ್ಗೆ ಗೊತ್ತಾ?

ಬೆಳಗಾವಿ
ಬೆಳಗಾವಿ , ಶುಕ್ರವಾರ, 23 ನವೆಂಬರ್ 2018 (13:23 IST)
ಬೆಳಗಾವಿ : ಕಾಂಗ್ರೆಸ್ ನಾಯಕರಾದ ಡಿ.ಕೆ.ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವಿನ ಸಮರ ಮುಂದುವರಿದಿದ್ದು, ಇದೀಗ ಡಿ.ಕೆ.ಶಿವಕುಮಾರ್ ಮಾತಿನ ಮೂಲಕ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ.


ಬೆಳಗಾವಿಯಲ್ಲಿ ರಮೇಶ್ ಜಾರಕಿಹೊಳಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವ ಡಿ.ಕೆ.ಶಿವಕುಮಾರ್, ದೊಡ್ಡವರ ವಿಚಾರವನ್ನು ನಾನು ಪ್ರಸ್ತಾಪ ಮಾಡಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ. ಹಾಗೇ ರಮೇಶ್ ಜಾರಕಿಹೊಳಿ ಸಕ್ಕರೆ ಕಾರ್ಖಾನೆಯಿಂದ ಕಬ್ಬಿನ ಬಿಲ್ ಬಾಕಿ ವಿಚಾರವಾಗಿ ಪ್ರತಿಕ್ರಿಯಿಸಿದ, ಅವರು ತುಂಬಾ ಪ್ರಾಮಾಣಿಕರಾಗಿದ್ದಾರೆ, ಬಾಕಿ ಹಣ ವಾಪಸ್ ಕೊಡುತ್ತಾರೆ ಎಂದು ಹೇಳಿದ್ದಾರೆ.


ತೆಲಂಗಾಣ ಚುನಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಕೆಶಿ ಅವರು ತೆಲಂಗಾಣ ಚುನಾವಣೆಗೆ ಕೆಲವು ಜವಾಬ್ದಾರಿಯನ್ನು ಹೈಕಮಾಂಡ್ ನೀಡಿದ್ದು, ಕೆಲ ರೆಬಲ್ ಸ್ಪರ್ಧಿಗಳನ್ನು ವಾಪಸ್ ತೆಗೆಸಿದ್ದೇವೆ. ಟಿಆರ್ ಎಸ್ ನುಡಿದಂತೆ ನಡೆದಿಲ್ಲ. ಹಾಗಾಗಿ ತೆಲಂಗಾಣದಲ್ಲಿ ಕಾಂಗ್ರೆಸ್ ಪರ ಉತ್ತಮ ವಾತವಾರಣವಿದೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಹಣ್ಣು ಬೇಡ ಎನ್ನುವ ಕೋತಿ ಗುಟ್ಕಾ ಚಟಕ್ಕೆ ಅಂಟಿಕೊಂಡಿದೆ!