Webdunia - Bharat's app for daily news and videos

Install App

ಖಾತೆ ಹಂಚಿಕೆಯ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Webdunia
ಗುರುವಾರ, 27 ಡಿಸೆಂಬರ್ 2018 (11:51 IST)
ಹುಬ್ಬಳ್ಳಿ : ರಮೇಶ್ ಜಾರಕಿಹೊಳಿ ಬೇಸರಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಾರಕಿಹೊಳಿ ಮಂತ್ರಿ ಸ್ಥಾನದಿಂದ ತೆಗೆದಿದ್ದಕ್ಕೆ ಬೇಸರಗೊಂಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.


ಅವರು ನನ್ನ ಸಂಪರ್ಕಕ್ಕೆ ಸಿಕ್ಕಿಲ್ಲ. ರಮೇಶ್ ಜಾರಕಿಹೊಳಿ ಮೂಲತಃ ಕಾಂಗ್ರೆಸ್ ವ್ಯಕ್ತಿ. ಅವರು ಕಾಂಗ್ರೆಸ್ ಪಕ್ಷದಲ್ಲಿಯೇ ಇರುತ್ತಾರೆ. ಕಾಂಗ್ರೆಸ್ ಶಾಸಕರು ಯಾರು ಬಿಜೆಪಿಗೆ ಹೋಗಲ್ಲ . ಅದೆಲ್ಲ ಕೇವಲ ಸುಳ್ಳಾಗಿದೆ. ಮುಂದೆಯೂ ಸುಳ್ಳಾಗಲಿದೆ ಎಂದು  ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.


ಖಾತೆ ಹಂಚಿಕೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು,’ಎಲ್ಲಾ ಸಚಿವರಿಗೆ ರಾಹುಲ್ ಗಾಂಧಿ ಖಾತೆಗಳನ್ನು ಹಂಚಲಿದ್ದಾರೆ. ಗೃಹ ಖಾತೆ ಇಂತವರಿಗೆ ಕೊಡಬೇಕೆಂದು ನಾನು ಪಟ್ಟು ಹಿಡಿದಿಲ್ಲ. ಸಚಿವ ಸ್ಥಾನ ಹಂಚಿಕೆ ಬಗ್ಗೆ ನನ್ನ ಅಭಿಪ್ರಾಯ ವೇಣುಗೋಪಾಲ್ ಗೆ ಹೇಳಿದ್ದೇನೆ. ಅವರು ಹೈಕಮಾಂಡ್ ಬಳಿ ಹೇಳಿ ತೀರ್ಮಾನಿಸುತ್ತಾರೆ’ ಎಂದು ಹೇಳಿದ್ದಾರೆ.


ಉಮೇಶ್ ಕತ್ತಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ‘ಕತ್ತಿ ಹೇಳಿಕೆಯಲ್ಲಿ ಸತ್ಯಾಂಶವಿಲ್ಲ. ಬಿಜೆಪಿಯವರಿಗೆ ಮಾಡಲು ಕೆಲಸವಿಲ್ಲ. ಅದಕ್ಕೆ ಹೀಗೆ ಹೇಳೋದು, ಸರ್ಕಾರಕ್ಕೆ ಏನೂ ಆಗಿಲ್ಲ, ಯಾವುದೇ ಸಮಸ್ಯೆಯಿಲ್ಲ. ಮೈತ್ರಿ ಸರ್ಕಾರ ಅಧಿಕಾರಾವಧಿ ಪೂರೈಸಲಿದೆ. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಹೊಂದಾಣಿಕೆ ಇದೆ. ಜೆಡಿಎಸ್ ನವರಿಗೆ ಎಷ್ಟು ಕ್ಷೇತ್ರಬೇಕು ಎಂದು ನಮಗೆ ಇನ್ನೂ ಹೇಳಿಲ್ಲ. ಸಭೆಯಲ್ಲಿ ಚರ್ಚೆಗೆ ಕುಳಿತಾಗ ತೀರ್ಮಾನ ಮಾಡುತ್ತೇವೆ. ಅವರು ಎಷ್ಟು ಕೇಳ್ತಾರೆ ಎಷ್ಟರಲ್ಲಿ ಗೆಲ್ಲಬಹುದು ಎನ್ನುವುದು ಚರ್ಚೆಗೆ ಬರಲಿದೆ ಎಂದು  ಮಾಜಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬಕ್ಕೆ ಮತ್ತೆ ಬಂತು ಕಠಿಣ ರೂಲ್ಸ್: ಗಣೇಶನನ್ನು ಕೂರಿಸುವವರು ತಪ್ಪದೇ ಗಮನಿಸಿ

ಗುಡ್ ನ್ಯೂಸ್: ಬಡ ಕ್ಯಾನ್ಸರ್ ರೋಗಿಗಳಿಗಾಗಿ ಡಾ ಸಿಎನ್ ಮಂಜುನಾಥ್ ಮಾಡಿದ್ದೇನು ನೋಡಿ

ಪ್ರಧಾನಿ, ಸಿಎಂ ಪದಚ್ಯುತಿ ಮಸೂದೆ ಮಂಡನೆಗೆ ಸಿದ್ದರಾಮಯ್ಯ ವಿರೋಧ: ನಿಮಗ್ಯಾಕೆ ಭಯ ಸರ್ ಎಂದ ನೆಟ್ಟಿಗರು

Karnataka Weather: ಸತತ ಮಳೆಯಿಂದ ಹೈರಾಣಾಗಿದ್ದರೆ ಇಲ್ಲಿದೆ ಗುಡ್ ನ್ಯೂಸ್

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments