ರೈತ ಮಹಿಳೆ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರ ; ಸಿಎಂ ಕುಮಾರಸ್ವಾಮಿ ಹೇಳಿದ್ದೇನು?

Webdunia
ಮಂಗಳವಾರ, 20 ನವೆಂಬರ್ 2018 (10:03 IST)
ಬೆಂಗಳೂರು : ರೈತ ಮಹಿಳೆ ಬಗ್ಗೆ ಅವಹೇಳನಕಾರಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಮಹಿಳೆಗೆ ಅಪಮಾನ ಮಾಡಿದರೆ ಈ ಕ್ಷಣವೇ ರಾಜೀನಾಮೆ ನೀಡುತ್ತೇನೆ. ಹೆಣ್ಣುಮಗಳಿಗೆ ನೋವಾಗಿದ್ದರೆ ಪದ ವಾಪಸ್ ತೆಗೆದುಕೊಳ್ಳುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.


ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಆ ಹೆಣ್ಣು ಮಗಳಿಗೆ ತಾಯಿ ಅಂತಾ ಪದ ಬಳಸಿದ್ದೇನೆ. ಅಲ್ಲ ತಾಯಿ ಇಷ್ಟು ದಿನ ಎಲ್ಲಿಗೆ ಹೋಗಿದ್ದೆ? ಎಲ್ಲಿ ಮಲಗಿದ್ದೇ ಅಂತಾ ಹೇಳಿದ್ದೆ.  ನಾನು ಕೆಟ್ಟ ಉದ್ದೇಶದಿಂದ, ಅಗೌರವ ಮಾಡಬೇಕು ಎಂಬ ಉದ್ದೇಶದಿಂದ ಮಾತನಾಡಿಲ್ಲ, ಆದರೆ ಇದನ್ನೇ ತಪ್ಪಾಗಿ ಅರ್ಥೈಸಲಾಗಿದೆ ಎಂದು ಹೇಳಿದ್ದಾರೆ.


ನಾನು ಮಹಿಳೆಯರಿಗೆ ಅಪಮಾನ ಮಾಡಿದೆ ಎಂದು ಹೇಳಿದರೆ ಒಂದು ಕ್ಷಣ ನಾನು ಈ ಸ್ಥಾನದಲ್ಲಿ ಇರುವುದಿಲ್ಲ. ನನ್ನ ವೈಯಕ್ತಿಕ ಜೀವನದ ಬಗ್ಗೆ ಚರ್ಚೆಗೂ ನಾನು ರೆಡಿ. ಒಳ್ಳೆ ಕೆಲಸ ಮಾಡುವುದು ತಪ್ಪೇ? ನಾನು ಏನು ತಪ್ಪು ಮಾಡಿದ್ದೇನೆ? ಆ ಮಹಿಳೆಗೆ ನೋವಾಗಿದ್ದರೆ ಆ ಪದವನ್ನು ವಾಪಸ್ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.


ಮುಖ್ಯಮಂತ್ರಿಯಾಗಿ ನಾನು ಟಿಎ, ಡಿಎ ತೆಗೆದುಕೊಂಡಿಲ್ಲ. ಸರ್ಕಾರಿ ಬಂಗಲೆಯನ್ನು ನಾನು ಬಳಸುತ್ತಿಲ್ಲ. ಪೆಟ್ರೋಲ್ ಬಿಲ್ ತಗೊಂಡಿಲ್ಲ. ನಾನು ನಾಡಿನ ಜನರನ್ನು ರಕ್ಷಿಸಲು ಇಲ್ಲಿ ಕುಳಿತಿದ್ದೇನೆ. ನನ್ನ ಮೇಲೆ ಯಾಕೆ ಅನುಮಾನ, ಯಾಕೆ ಆಕ್ರೋಶ? 45 ಸಾವಿರ ಕೋಟಿ ಸಾಲಮನ್ನಾ ಮಾಡಿದ್ದಕ್ಕಾ ಎಂದು ಅವರು ಪ್ರಶ್ನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಷ್ಟು ಜನರ ಪ್ರೀತಿ ಗಳಿಸಿದ್ದೀಯಲ್ಲಾ ಅಣ್ಣಾ..: ಡಿಕೆಶಿಗೆ ವಿಜಯ್ ಪ್ರಕಾಶ್ ಹೊಗಳಿಕೆ

Union Budget 2026: ರಾಜ್ಯಕ್ಕೆ ನಿರೀಕ್ಷಿಸಿದಷ್ಟು ಅನುದಾನ ಸಿಕ್ಕಿದೆಯೇ

ವಿಕಸಿತ ಭಾರತದ ಸಂಕಲ್ಪಕ್ಕೆ ಪೂರಕ ಬಜೆಟ್: ವಿಜಯೇಂದ್ರ

ಗಂಡನ ಚಿತೆ ಆರುವ ಮೊದಲೇ ಅಜಿತ್ ಪವಾರ್ ಪತ್ನಿ ಉಪ ಮುಖ್ಯಮಮಂತ್ರಿಯಾಗಿದ್ದೇಕೆ: ಮಾಸ್ಟರ್ ಪ್ಲ್ಯಾನ್ ಯಾರದ್ದು

Union Budget 2026: ಆದಾಯ ತೆರಿಗೆ ವಂಚಿಸುವವರಿಗೆ ಶಾಕ್ ಕೊಟ್ಟ ನಿರ್ಮಲಾ ಸೀತಾರಾಮನ್

ಮುಂದಿನ ಸುದ್ದಿ
Show comments