Select Your Language

Notifications

webdunia
webdunia
webdunia
webdunia

ಸರ್ಕಾರದ ಬಳಿ ಹಣವಿಲ್ಲ ಎಂದ ಸಿದ್ದರಾಮಯ್ಯ ಆರೋಪಕ್ಕೆ ಸಚಿವ ಶ್ರೀರಾಮುಲು ಹೇಳಿದ್ದೇನು?

ಸರ್ಕಾರದ ಬಳಿ ಹಣವಿಲ್ಲ ಎಂದ ಸಿದ್ದರಾಮಯ್ಯ ಆರೋಪಕ್ಕೆ ಸಚಿವ ಶ್ರೀರಾಮುಲು ಹೇಳಿದ್ದೇನು?
ಗದಗ , ಶುಕ್ರವಾರ, 12 ಫೆಬ್ರವರಿ 2021 (12:07 IST)
ಗದಗ : ಸರ್ಕಾರದ ಬಳಿ ಹಣವಿಲ್ಲ ಎಂದು ಸಿದ್ದರಾಮಯ್ಯ ಆರೋಪಕ್ಕೆ ಸಚಿವ ಶ್ರೀರಾಮುಲು ತಕ್ಕ ಉತ್ತರ ನೀಡಿದ್ದಾರೆ.

ಬಾದಾಮಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋಟ್ಯಂತರ ರೂ.ವೆಚ್ಚದ ಅಭಿವೃದ್ಧಿ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಈ ಹಣ ಎಲ್ಲಿಂದ ಬಂತು ಎಂದು ಸಿದ್ದರಾಮಯ್ಯ ಹೇಳಬೇಕು, ಮಾಜಿ ಸಿಏಂ ಸಿದ್ದರಾಮಯ್ಯ ಅವರಿಗೆ ಬೇರೆ ವಿಷಯ ಇಲ್ಲ. ಹೀಗಾಗಿ ರಾಜಕೀಯ ಪ್ರೇರಿತ ಹೇಳಿಕೆ ನೀಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಕ್ರಮಗಳು ನಿಂತಿಲ್ಲ. ಕೊವಿಡ್, ಪ್ರವಾಹ ಹಿನ್ನಲೆಯಲ್ಲಿ ಸರ್ಕಾರಕ್ಕೆ ಸ್ವಲ್ಪ ಸಮಸ್ಯೆಯಾಗಿದೆ. ಈಗ ಎಲ್ಲ ಸಚಿವರು ರಾಜ್ಯ ಪ್ರವಾಸ ಮಾಡುತ್ತಿದ್ದಾರೆ. ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯ ಕರ್ನಾಟಕದ ಟ್ರಂಪ್ ಎಂದ ಬಿಜೆಪಿ ಎಂಎಲ್ ಸಿ