Select Your Language

Notifications

webdunia
webdunia
webdunia
webdunia

ಸುಮಲತಾ ವಿರುದ್ಧ ರೇವಣ್ಣ ಹೇಳಿಕೆಯ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಸುಮಲತಾ ವಿರುದ್ಧ ರೇವಣ್ಣ ಹೇಳಿಕೆಯ ಬಗ್ಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?
ಮಂಡ್ಯ , ಶನಿವಾರ, 9 ಮಾರ್ಚ್ 2019 (13:50 IST)
ಮಂಡ್ಯ : ಸುಮಲತಾ ಅಂಬರೀಶ್ ಬಗ್ಗೆ ಲೋಕೋಪಯೋಗಿ ಸಚಿವ ರೇವಣ್ಣ ಅವರು ನೀಡಿರುವ ಹೇಳಿಕೆಯ ಕುರಿತು ನಿಖಿಲ್ ಕುಮಾರಸ್ವಾಮಿ  ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ್ದಾರೆ.


ಪತಿ, ಮಾಜಿ ಸಚಿವ ಅಂಬರೀಶ್ ಸತ್ತೂ ಇನ್ನೂ ಆರು ತಿಂಗಳಾಗಿಲ್ಲ. ಸುಮಲತಾ ಅವರಿಗೆ ಇದೆಲ್ಲಾ ಬೇಕಿತ್ತಾ? ಕುಟುಂಬ ರಾಜಕಾರಣ, ರಾಜಕೀಯದಲ್ಲಿ ಸಹಜ ಎಂದು ಸುಮಲತಾ ಅಂಬರೀಶ್ ಬಗ್ಗೆ ಹೆಚ್.ಡಿ. ರೇವಣ್ಣ ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಈ ಬಗ್ಗೆ ಮಳವಳ್ಳಿಯಲ್ಲಿ ಮಾತನಾಡಿದ ನಿಖಿಲ್, “ರೇವಣ್ಣ ಯಾವ ಅರ್ಥದಲ್ಲಿ ಹೇಳಿದ್ದಾರೆ ನಿಜವಾಗಿಯೂ ನನಗೆ ಗೊತ್ತಿಲ್ಲ.


ನಾನಾಗಲಿ ನಮ್ಮಪ್ಪ, ಅಮ್ಮ, ಕುಟುಂಬ ಒಳ್ಳೆಯ ನಡತೆಯನ್ನು ಹೇಳಿಕೊಟ್ಟಿದೆ. ಮಹಿಳೆಯರಿಗೆ ಗೌರವ ಕೊಡೋದನ್ನು ಹೇಳಿಕೊಟ್ಟಿದೆ. ರೇವಣ್ಣ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ನನಗೆ ಗೊತ್ತಿಲ್ಲ” ಎಂದು ರೇವಣ್ಣ ವಿರುದ್ಧ ನಿಖಿಲ್ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸುಮಲತಾ ಬಗ್ಗೆ ರೇವಣ್ಣ ವಿವಾದಾತ್ಮಕ ಹೇಳಿಕೆ ಬಳಿಕ ಸಿಎಂ ಎಚ್ ಡಿಕೆ ಜೆಡಿಎಸ್ ನಾಯಕರಿಗೆ ಖಡಕ್ ವಾರ್ನಿಂಗ್!