Webdunia - Bharat's app for daily news and videos

Install App

ಪುರಸಭೆ ಸದಸ್ಯನಿಗೆ ನಡುರೋಡಲ್ಲೇ ಜನರು ಮಾಡಿದ್ದೇನು?

Webdunia
ಶುಕ್ರವಾರ, 24 ಮೇ 2019 (16:37 IST)
ಮಾಜಿ ಪುರಸಭೆ ಸದಸ್ಯರೊಬ್ಬರು ಮಾಡಬಾರದ ಕೆಲಸ ಮಾಡಿದ್ದರಿಂದ ಜನರಿಂದ ತರಾಟೆಗೆ ಒಳಗಾಗಿದ್ದಾರೆ. 

ಕುಡಿಯುವ ನೀರು ಮಾರಾಟ ಮಾಡುತ್ತಿರುವ ಮಾಜಿ ಪುರಸಭೆ ಸದಸ್ಯ ಸರ್ಕಾರಕ್ಕೆ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ.

ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಬೇಕಿದ್ದ ನೀರನ್ನು ಮಾಜಿ ಪುರಸಭೆ ಸದಸ್ಯರೊಬ್ಬರು ಮಾರಾಟ ಮಾಡಿಕೊಂಡ ಘಟನೆ ನಡೆದಿದೆ.

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಾಂತಿ ನಗರದಲ್ಲಿ ನಡೆದ ಘಟನೆ ಇದಾಗಿದ್ದು, ಬೀರಪ್ಪ ಯಂಕಚ್ಚಿ ಎಂಬುವರಿಂದ ನೀರು ಮಾರಾಟ ದಂಧೆ ನಡೆಯುತ್ತಿದೆ.

ಬರಗಾಲದಲ್ಲಿ ಅಥಣಿ ಪಟ್ಟಣದ ವಾರ್ಡಗಳಿಗೆ ಉಚಿತ ನೀರು ಪೂರೈಸಲು ಟ್ಯಾಂಕರ್ ಹಾಕಿದ್ದು, ಅದಕ್ಕಾಗಿ ರಾಜ್ಯ ಸರ್ಕಾರದಿಂದ ಹಣ ಪಡೆದರು ಕೂಡ ಸಾರ್ವಜನಿಕರಿಂದ ಹಣ ಪಡೆದು ನೀರು ಮಾರಾಟಮಾಡಲಾಗುತ್ತಿತ್ತು. ರೆಡ್ ಹ್ಯಾಂಡ್ ಆಗಿ ಹಿಡಿದ ಸಾರ್ವಜನಿಕರು ಬಿರಪ್ಪ ಯಂಕಚ್ಚಿ ಅವರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಪುರಸಭೆ ಉಚಿತ ನೀರು ಪೂರೈಕೆ ಪೋಸ್ಟರ್ ಹಚ್ಚಿದ ವಾಹನದಲ್ಲಿ ನೀರು ಪೂರೈಸುತ್ತಿರುವ ಬೀರಪ್ಪ ಯಂಕಂಚಿ ವಾಹನಕ್ಕೆ ನಂಬರ್ ಆಗಲಿ, ಜಿಪಿಎಸ್ ಆಗಲಿ ಅಳವಡಿಸದೆ ನೀರು ಪೂರೈಕೆ ಮಾಡಿರುವುದಾಗಿ ಸುಳ್ಳು ಹೇಳಿ ಸರ್ಕಾರಕ್ಕೆ ವಂಚಿಸುತ್ತಿರುವ ಆರೋಪದಲ್ಲಿ ಸಾರ್ವಜನಿಕರು ತರಾಟೆಗೆ ತೆಗೆದುಕೊಂಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments