Webdunia - Bharat's app for daily news and videos

Install App

ದೇವೇಗೌಡರು ಸೋತಿದ್ದಕ್ಕೆ ಪ್ರಜ್ವಲ್ ಹೇಳಿದ್ದೇನು?

Webdunia
ಶುಕ್ರವಾರ, 24 ಮೇ 2019 (14:31 IST)
ಜೆಡಿಎಸ್ ಪಾಳೆಯದಲ್ಲಿ ಒಂದೆಡೆ ಸಂತೋಷ, ಮತ್ತೊಂದೆಡೆ ಬೇಸರ ಇದೆ. ಏತನ್ಮಧ್ಯೆ ನೂತನ ಸಂಸದ ಪ್ರಜ್ವಲ್ ರೇವಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ.

ಸಂಸದರಾಗಿ ಆಯ್ಕೆಯಾದ ಬಳಿಕ ಪ್ರಜ್ವಲ್ ರೇವಣ್ಣ ಮೊದಲ ಸುದ್ದಿಗೋಷ್ಟಿ ನಡೆಸಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟ ಹಿನ್ನಲೆಯಲ್ಲಿ ಜಿಲ್ಲೆಯ ಜನರು ನನ್ನ ಗೆಲ್ಲಿಸಿರುವುದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದರು.
ಜೆಡಿಎಸ್ - ಕಾಂಗ್ರೆಸ್ ನ ಎಲ್ಲರೂ ನಮಗೆ ಶಕ್ತಿ ತುಂಬಿದ್ದಾರೆ.

ಇದು ಪ್ರಜ್ವಲ್ ರೇವಣ್ಣ ಗೆಲುವಲ್ಲ ನನ್ನ ಜಿಲ್ಲೆಯ ಜನತೆಯ ಗೆಲುವು ಎಂದರು. ಉಭಯ ಪಕ್ಷಗಳ ಕಾರ್ಯಕರ್ತರು ಹೋರಾಟ ಮಾಡಿ ಗೆಲ್ಲಿಸಿದ್ದಾರೆ. ಇದು ಕಾರ್ಯಕರ್ತರು ಮತ್ತು ದೇವೇಗೌಡರ ಗೆಲುವು ಎಂದರು.
ದೇವೇಗೌಡರು ಸೋತಿರುವುದಕ್ಕೆ ದುಃಖ ಆಗುತ್ತಿದೆ. ಹೋರಾಟವೇ ಜೀವನ ಎಂದುಕೊಂಡಿದ್ದ ಗೌಡರಿಗೆ ಆಕಸ್ಮಿಕ ಸೋಲಾಗಿದೆ ಎಂದರು.

ನಾನು ರಾತ್ರಿ ಇಡೀ ಚಿಂತಿಸಿ ಒಂದು ನಿರ್ಧಾರಕ್ಕೆ ಬಂದಿದ್ದೇನೆ. ಹಾಸನ ಜಿಲ್ಲೆಯ ಜನರು ತಪ್ಪು ತಿಳಿಯ ಬಾರದು. ನಾನು ರಾಜೀನಾಮೆ ಕೊಡೋ ತೀರ್ಮಾನಕ್ಕೆ ಬಂದಿದ್ದೇನೆ.  ಮತ್ತೆ ದೇವೇಗೌಡರಿಗೆ ಶಕ್ತಿ ತುಂಬೋದು ನನ್ನ ಉದ್ದೇಶವಾಗಿದೆ. ನನ್ನ ಸ್ಥಾನಕ್ಕೆ ನಾನು ರಾಜೀನಾಮೆ ನೀಡುತ್ತಿರೋದಕ್ಕೆ ನನಗೆ ಬೇಜಾರಿಲ್ಲ ಎಂದರು. ಮೋದಿಯವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ರಾಜ್ಯದಿಂದ ಆಯ್ಕೆಯಾದ ಎಲ್ಲಾ ಲೋಕಸಭಾ ಸದಸ್ಯರಿಗೂ ಅಭಿನಂದಿಸುತ್ತೇನೆ ಎಂದು ಪ್ರಜ್ವಲ್ ರೇವಣ್ಣ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments