Select Your Language

Notifications

webdunia
webdunia
webdunia
webdunia

ಪ್ರಧಾನಿಯಾಗಲು ಖರ್ಗೆಗೆ ಅರ್ಹತೆ ಇದೆ ಎಂಬ ಹೇಳಿಕೆ ಬಗ್ಗೆ ಸಿದ್ಧರಾಮಯ್ಯ ಹೇಳಿದ್ದೇನು?

ಪ್ರಧಾನಿಯಾಗಲು ಖರ್ಗೆಗೆ ಅರ್ಹತೆ ಇದೆ ಎಂಬ ಹೇಳಿಕೆ ಬಗ್ಗೆ ಸಿದ್ಧರಾಮಯ್ಯ ಹೇಳಿದ್ದೇನು?
ಹುಬ್ಬಳ್ಳಿ , ಸೋಮವಾರ, 25 ಫೆಬ್ರವರಿ 2019 (10:27 IST)
ಹುಬ್ಬಳ್ಳಿ : ಲೋಕ ಸಭಾ ಚುನಾವಣೆಗೆ ಸ್ಪರ್ಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಅವರು ಹೇಳಿದ್ದಾರೆ.


ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,’ ಲೋಕ ಸಭಾ ಚುನಾವಣೆಗೆ ನಾವು ತಯಾರಿ ನಡೆಸಿದ್ದೇವೆ. ಆದರೆ  ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ. ಕೊಪ್ಪಳ, ಧಾರವಾಡ, ಮೈಸೂರು ಎಲ್ಲೂ ಸ್ಪರ್ಧಿಸುವುದಿಲ್ಲ. ಲೋಕ ಸಭಾ ಚುನಾವಣೆಗೆ ಸ್ಪರ್ಧಿಸಲು ಹೈಕಮಾಂಡ್ ಹೇಳಿಲ್ಲ. ನಾನು ರಾಜ್ಯ ರಾಜಕರಣದಲ್ಲೇ ಮುಂದುವರಿಯುತ್ತೇನೆ’ ಎಂದು ಹೇಳಿದ್ದಾರೆ.
ಹಾಗೇ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ ವಿಚಾರದ ಬಗ್ಗೆ ಮಾತನಾಡಿದ ಅವರು,ನಾವಿನ್ನೂ ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಮಾಡಿಲ್ಲ. ಈ ಬಗ್ಗೆ ನಂತರ ಚರ್ಚಿಸುವೆ ಎಂದು ಸುಮಲತಾಗೆ ತಿಳಿಸಿದ್ದೇನೆ ಎಂದು ಅವರು ತಿಳಿಸಿದ್ದಾರೆ.


ಅದೇ ವೇಳೆ ಪ್ರಧಾನಿಯಾಗಲು ಖರ್ಗೆಗೆ ಅರ್ಹತೆ ಇದೆ ಎಂಬ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿದ ಅವರು,’ಖರ್ಗೆಗೆ ಪ್ರಧಾನಿಯಾಗುವ ಸಾಮರ್ಥ್ಯ ಇದೆ ಎಂದಿದ್ದಾರೆ. ಆದರೆ ರಾಹುಲ್ ಗಾಂಧಿಗೆ ಸಾಮರ್ಥ್ಯ ಇಲ್ಲ ಎಂದು ಹೇಳಿಲ್ಲ ಎಂದು ಅವರು ಶಾಮನೂರು ಹೇಳಿಕೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.   


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಾಲ ಮನ್ನಾ ಘೋಷಣೆ ಮಾಡಿ ತಾತ್ಕಾಲಿಕವಾಗಿ ರೈತರನ್ನು ಖುಷಿ ಪಡಿಸಲಾರೆ-ಪ್ರಧಾನಿ ಮೋದಿ