Select Your Language

Notifications

webdunia
webdunia
webdunia
webdunia

ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂಬ ಶಾಸಕರ ಅಭಿಪ್ರಾಯಕ್ಕೆ ಸಿದ್ದರಾಮಯ್ಯ ಹೇಳಿದ್ದೇನು?

ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎಂಬ ಶಾಸಕರ ಅಭಿಪ್ರಾಯಕ್ಕೆ ಸಿದ್ದರಾಮಯ್ಯ ಹೇಳಿದ್ದೇನು?
ಹುಬ್ಬಳ್ಳಿ , ಬುಧವಾರ, 8 ಮೇ 2019 (12:17 IST)
ಹುಬ್ಬಳ್ಳಿ : ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಅನ್ನೋ ಶಾಸಕರ ಅಭಿಪ್ರಾಯದ ಕುರಿತು ಇದೀಗ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.




ಸಮ್ಮಿಶ್ರ ಸರ್ಕಾರ ರಚನೆಯಾಗಿ ಹಲವು ತಿಂಗಳುಗಳೇ ಕಳೆದಿವೆ. ಈ ನಡುವೆ ಕಾಂಗ್ರೆಸ್ ನಾಯಕರು ಮಾಜಿ ಸಿಎಂ ಸಿದ್ಧರಾಮಯ್ಯ ಅವರೇ ನಮಗೆ ಸಿಎಂ, ಅವರು ಮತ್ತೆ ಸಿಎಂ  ಆಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ವಿಚಾರದ ಬಗ್ಗೆ ಸಮ್ಮಿಶ್ರ ಸರ್ಕಾರದಲ್ಲಿ ಈಗಾಗಲೇ ಹಲವು ಬಾರಿ ವಾಗ್ವಾದ ನಡೆದಿತ್ತು.


ಆದರೆ ಇದೀಗ ಮತ್ತೆ ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎನ್ನುತ್ತಿದ್ದು, ಈ ಬಗ್ಗೆ ಮಾತನಾಡಿದ ಸಿದ್ದರಾಮಯ್ಯ ಅವರು,ಸಿಎಂ ಕುಮಾರಸ್ವಾಮಿ ಒಳ್ಳೆಯ ಕೆಲಸ ಮಾಡ್ತಿದ್ದಾರೆ. ಅಲ್ಲದೇ ಇವಾಗ ಸಿಎಂ ಕುರ್ಚಿ ಖಾಲಿ ಇಲ್ಲವಲ್ಲ. ನಮ್ಮ ಶಾಸಕರು ಅಭಿಮಾನದಿಂದ ಅವರ ಅಭಿಪ್ರಾಯ ಹೇಳ್ತಾರೆ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮಾರ್ಕೇಂಡೇಯ ಜಲಾಶಯಕ್ಕೂ ತಮಿಳುನಾಡಿನಿಂದ ವಿರೋಧ