Webdunia - Bharat's app for daily news and videos

Install App

ಡಿಸಿಎಂ ಆಗುವ ಬಗ್ಗೆ ಶ್ರೀರಾಮುಲು ಹೇಳಿದ್ದೇನು?

Webdunia
ಭಾನುವಾರ, 25 ಆಗಸ್ಟ್ 2019 (13:41 IST)
ಬೆಂಗಳೂರು : ಬಿಜೆಪಿ ಸರ್ಕಾರದಲ್ಲಿ ಡಿಸಿಎಂ ಪಟ್ಟಕ್ಕಾಗಿ ಬಾರೀ ಪೈಪೋಟಿ ನಡೆಯುತ್ತಿದ್ದು, ಶ್ರೀರಾಮುಲು ಡಿಸಿಎಂ ಆಗಬೇಕು ಎನ್ನುವ ಅಭಿಪ್ರಾಯಗಳು ಕೇಳಿ ಬರುತ್ತಿವೆ. ಅಲ್ಲದೇ ಸಾಮಾಜಿಕ ಜಾಲತಾಣಗಳಲ್ಲೂ ಈ ಸುದ್ದಿ ಹರಿದಾಡುತಿದೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ರಾಷ್ಟ್ರೀಯ ಅಧ್ಯಕ್ಷರು ಮತ್ತು ಸಿಎಂ ಯಡಿಯೂರಪ್ಪ ಈ ವಿಚಾರದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು. ಪಕ್ಷದ ನಿರ್ಧಾರವೇ ಅಂತಿಮ ನಿರ್ಧಾರ. ಪಕ್ಷಕ್ಕಾಗಿ ಕಾಯ ವಾಚ ಮನಸ್ಸು ಕೆಲಸ ಮಾಡುತ್ತೇವೆ. ಸ್ಥಾನಮಾನಕ್ಕೆ ರಾಜಕೀಯ ಮಾಡಿಲ್ಲ, ಸಿದ್ಧಾಂತಕ್ಕಾಗಿ ರಾಜಕಾರಣ ಮಾಡುತ್ತಿದ್ದೇವೆ. ಪಕ್ಷಕ್ಕಾಗಿ ನಮ್ಮ ಆಸೆಗಳನ್ನು ಕುಗ್ಗಿಸಿಕೊಳ್ಳಬೇಕಾಗುತ್ತೆ ಎಂದು ಹೇಳಿದ್ದಾರೆ.


ಅನರ್ಹ ಶಾಸಕ ರಮೇಶ್ ಜಾರಕಿಹೊಳಿಗೆ ಡಿಸಿಎಂ ಸ್ಥಾನ ಕೊಟ್ಟರೂ ಪಾರ್ಟಿ ತೀರ್ಮಾನಕ್ಕೆ ನಾನು ಬದ್ಧ. ನಮ್ಮ ಸ್ವಾರ್ಥಕ್ಕಾಗಿ ಪಕ್ಷಕ್ಕೆ ಇರಿಸು ಮುರಿಸು ಉಂಟು ಮಾಡಬಾರದು. 100% ಪಕ್ಷಕ್ಕಾಗಿ ನಾನು ಯಾವುದೇ ತ್ಯಾಗಕ್ಕೂ ಸಿದ್ಧ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments