Select Your Language

Notifications

webdunia
webdunia
webdunia
webdunia

ರಾಮನಗರ ಜಿಲ್ಲೆಯನ್ನು ಮರುನಾಮಕರಣ ಮಾಡುವ ಬಗ್ಗೆ ಸಿಎಂ ಹೇಳಿದ್ದೇನು?

ರಾಮನಗರ ಜಿಲ್ಲೆಯನ್ನು ಮರುನಾಮಕರಣ ಮಾಡುವ ಬಗ್ಗೆ ಸಿಎಂ ಹೇಳಿದ್ದೇನು?
ಬೆಂಗಳೂರು , ಸೋಮವಾರ, 6 ಜನವರಿ 2020 (06:49 IST)
ಬೆಂಗಳೂರು : ರಾಮನಗರ ಜಿಲ್ಲೆಯನ್ನು ಮರುನಾಮಕರಣ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆಯೊಂದನ್ನು ನೀಡಿದ್ದಾರೆ.



ರಾಮನಗರವನ್ನು ನವಬೆಂಗಳೂರು ಎಂದು ಮರುನಾಮಕರಣ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಬಿಜೆಪಿ ನಾಯಕರು ಈ ಬಗ್ಗೆ  ಸಿಎಂ ಯಡಿಯೂರಪ್ಪ ಅವರ ಮುಂದೆ ಈ ಪ್ರಸ್ತಾವನೆಯನ್ನು ಇಟ್ಟಿದ್ದಾರೆ ಎಂಬ ಮಾತು ಕೇಳಿಬಂದಿತ್ತು. ಇದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ಕೂಡ ಕೊಟ್ಟಿದ್ದರು.


ಇದೀಗ ಈ ಬಗ್ಗೆ ಮಾತನಾಡಿದ ಸಿಎಂ, ರಾಮನಗರ ಜಿಲ್ಲೆ ಮರುನಾಮಕರಣ ಬಗ್ಗೆ ಅನಾವಶ್ಯಕ ಚರ್ಚೆ ನಡೆಯುತ್ತಿದೆ. ಸರ್ಕಾರದ ಮುಂದೆ ಆ ತರಹದ ಯಾವುದೇ ಯೋಚನೆ ಇಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಸುದ್ದಿಯಲ್ಲಿರಲು ಮತ್ತು ಜನರಲ್ಲಿ ಗೊಂದಲ ಸೃಷ್ಟಿಸಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಎ ವಿರೋಧಿಸುತ್ತಿರುವವರಿಗೆ ಈ ದಾಳಿ ತಕ್ಕ ಸೂಕ್ತ ಉತ್ತರ ಎಂದ ಅಮಿತ್ ಶಾ