Select Your Language

Notifications

webdunia
webdunia
webdunia
webdunia

ಟಿಕೆಟ್ ಗಾಗಿ ಪಟ್ಟು ಹಿಡಿದ ಶರತ್ ಬಚ್ಚೇಗೌಡರ ಬೆಂಬಲಿಗರಿಗೆ ಸಿಎಂ ಹೇಳಿದ್ದೇನು?

ಟಿಕೆಟ್ ಗಾಗಿ ಪಟ್ಟು ಹಿಡಿದ ಶರತ್ ಬಚ್ಚೇಗೌಡರ ಬೆಂಬಲಿಗರಿಗೆ ಸಿಎಂ ಹೇಳಿದ್ದೇನು?
ಬೆಂಗಳೂರು , ಮಂಗಳವಾರ, 24 ಸೆಪ್ಟಂಬರ್ 2019 (11:38 IST)
ಬೆಂಗಳೂರು : ಹೊಸಕೋಟೆ ಕ್ಷೇತ್ರದಲ್ಲಿ ಉಪಚುನಾವಣೆಗೆ ಶರತ್ ಬಚ್ಚೇಗೌಡಗೆ ಬಿಜೆಪಿ ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಆಗ್ರಹಿಸಿದ್ದಾರೆ.



ಈ ಹಿನ್ನಲೆಯಲ್ಲಿ ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನಿವಾಸದ ಎದುರು ಶರತ್ ಬಚ್ಚೇಗೌಡ ಬೆಂಬಲಿಗರು ಧರಣಿ ನಡೆಸುತ್ತಿದ್ದು, ಎಂಟಿಬಿ ನಾಗರಾಜ್ ಬದಲು ಶರತ್ ಬಚ್ಚೇಗೌಡಗೆ ಬಿಜೆಪಿ ಟಿಕೆಟ್ ನೀಡುವಂತೆ ಒತ್ತಾಯಿಸುತ್ತಿದ್ದಾರೆ.


ಈ ಬಗ್ಗೆ ಶರತ್ ಬಚ್ಚೇಗೌಡ ಬೆಂಬಲಿಗರಿಗೆ ಸಿಎಂ ಮನವರಿಕೆ ಮಾಡಲು ಮುಂದಾಗಿದ್ದು, ನಮಗೆ ಆಪತ್ಕಾಲದಲ್ಲಿ ಕೈ ಹಿಡಿದವರು ಎಂಟಿಬಿ ನಾಗರಾಜ್ . ಈಗ ನಾವು ಅವರ ಕೈ ಬಿಟ್ಟಲ್ಲಿ ಮಾತು ತಪ್ಪಿದಂತಾಗುತ್ತದೆ. ಹೀಗಾಗಿ ಈ ಬಾರಿ ಅವರಿಗೆ ಟಿಕೆಟ್ ನೀಡುವ ಬಗ್ಗೆ ಚಿಂತನೆ ನಡೆದಿದೆ. ನಾವೆಲ್ಲರೂ ಎಂಟಿಬಿ ಗೆ ಬೆಂಬಲ ನೀಡಿ ಪಕ್ಷವನ್ನ ಗೆಲ್ಲಿಸಬೇಕು ಎಂದು ಹೇಳಿದ್ದಾರೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಜಿಟಿಡಿ ಹೇಳಿಕೆ ಇಟ್ಟುಕೊಂಡು ಕುಮಾರಸ್ವಾಮಿಗೆ ಟಾಂಗ್ ಕೊಟ್ಟ ಸಿದ್ದರಾಮಯ್ಯ