Webdunia - Bharat's app for daily news and videos

Install App

ಹುಣಸೂರು ಪ್ರತ್ಯೇಕ ಜಿಲ್ಲೆಯಾಗಬೇಕೆಂಬ ಹೆಚ್.ವಿಶ್ವನಾಥ್ ಮನವಿಗೆ ಕಾಂಗ್ರೆಸ್ ಹೇಳಿದ್ದೇನು?

Webdunia
ಮಂಗಳವಾರ, 15 ಅಕ್ಟೋಬರ್ 2019 (10:56 IST)
ಬೆಂಗಳೂರು : ಹುಣಸೂರು ಪ್ರತ್ಯೇಕ ಜಿಲ್ಲೆಯಾಗಬೇಕೆಂಬ ಅನರ್ಹ ಶಾಸಕ ಹೆಚ್.ವಿಶ್ವನಾಥ್ ಮನವಿಗೆ ಇದೀಗ ರಾಜ್ಯ ಕಾಂಗ್ರೆಸ್ ಪಕ್ಷ ಟಾಂಗ್ ನೀಡಿದೆ.




ಈ ಬಗ್ಗೆ ಟ್ವೀಟ್ ಮಾಡಿದ ರಾಜ್ಯ ಕಾಂಗ್ರೆಸ್, ಹೆಚ್.ವಿಶ್ವನಾಥ್ ಅವರ ಇಷ್ಟು ವರ್ಷದ ರಾಜಕಾರಣದಲ್ಲಿ ಹುಣಸೂರು ಜಿಲ್ಲೆಯಾಗಬೇಕು ಎನ್ನುವ ವಿಷಯವನ್ನು ಎಷ್ಟು ಬಾರಿ ಪ್ರಸ್ತಾಪಿಸಿದ್ದಾರೆ? ಈಗ ಡಿಸೆಂಬರ್ 5 ರಂದು ಉಪಚುನಾವಣೆ ಬಂದಿರುವ ಕಾರಣಕ್ಕೆ ಇಂತಹ ಗಿಮಿಕ್ ಮಾಡದರೆ ಜನರು ಒಪ್ಪುತ್ತಾರೆಯೇ? ಇಂತಹ ರಾಜಕೀಯ ಪ್ರೇರಿತ ಅಭಿಪ್ರಾಯವನ್ನು ಮತದಾರರು ತಿರಸ್ಕರಿಸಲಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.


ಹಾಗೇ ವಿಜಯನಗರ ಜಿಲ್ಲೆ ಆಗಬೇಕು, ಹುಣಸೂರನ್ನು ಜಿಲ್ಲೆ ಮಾಡಬೇಕು ಎನ್ನುವಂತಹ ವಿಚಾರಗಳನ್ನು ಸ್ವಾರ್ಥ ರಾಜಕಾರಣಕ್ಕಾಗಿ ಬಳಕೆ ಮಾಡಿಕೊಳ್ಳತ್ತಿರುವುದು ಸರಿಯಲ್ಲ.  ಜಿಲ್ಲೆಯ ಮುಖಂಡರು, ಸ್ಥಳೀಯರೊಂದಿಗೆ ಈ ಬಗ್ಗೆ ಚರ್ಚಿಸಿ ತೀರ್ಮಾನಿಸಬೇಕು. ಬಳಿಕ ಅಗತ್ಯತೆ ಇದ್ದಲ್ಲಿ ಒಮ್ಮತದಲ್ಲಿ ವ್ಯವಸ್ಥಿತವಾಗಿ ಪ್ರಸ್ತಾವನೆ ಸಲ್ಲಿಸಬೇಕು ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments