Webdunia - Bharat's app for daily news and videos

Install App

ಗಾಧ್ರಿಪಾಲನಾಯಕನ ಬೆಟ್ಟದಲ್ಲಿ ಸಾಮೂಹಿಕವಾಗಿ ಮಾಡಿದ್ದೇನು?

Webdunia
ಗುರುವಾರ, 1 ಆಗಸ್ಟ್ 2019 (18:19 IST)
ಹಿರೇಗುಂಟನೂರು ಹೋಬಳಿ ವ್ಯಾಪ್ತಿಯಲ್ಲಿ ಹತ್ತೂರು ಜನರು ಹೈರಾಣಾಗಿದ್ದಾರೆ.

ಚಿತ್ರದುರ್ಗದ ಹಿರೇಗುಂಟನೂರು ಹೋಬಳಿ ವ್ಯಾಪ್ತಿಯಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ, ಬರದ ಛಾಯೆ ಆವರಿಸಿದೆ. ಹೀಗಾಗಿ ಹಿರೇಗುಂಟನೂರಿನ ಸುತ್ತಮುತ್ತಲಿನ ಹತ್ತಕ್ಕೂ ಹೆಚ್ಚು ಗ್ರಾಮಗಳ ಜನರು, ತಮ್ಮ ತಮ್ಮ ಗ್ರಾಮಗಳ ಗ್ರಾಮ ದೇವರುಗಳನ್ನು, ಮೊದಲು ಕಡಲೆಗುದ್ದು ಗ್ರಾಮದ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ತಂದಿದ್ದಾರೆ.

ಎಲ್ಲಾ ಊರಿನ ದೇವರುಗಳನ್ನು, ದೇವಾಲಯದ ಆವರಣದಲ್ಲಿ ಪೂಜೆ ಸಲ್ಲಿಸಿದ್ದಾರೆ. ನಂತರ, ಗಾಧ್ರಿಪಾಲನಾಯಕನ ಬೆಟ್ಟಕ್ಕೆ ಕರೆತಂದು, ಅಲ್ಲಿ ಎಲ್ಲಾ ದೇವರುಗಳಿಗೆ ಸಾಮೂಹಿಕವಾಗಿ ವಿಶೇಷ ಪೂಜೆ ಸಲ್ಲಿಸಿ ಮಳೆಗಾಗಿ ಪ್ರಾರ್ಥಿಸಿದ್ರು.

ಕಳೆದ ಎರಡೂ ಮೂರು ವರ್ಷಗಳಿಂದ ಈ ಭಾಗದಲ್ಲಿ ಮಳೆ ಬೀಳುವ ಪ್ರಮಾಣ ಕಡಿಮೆಯಾಗಿದೆ. ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊಳವೆ ಬಾವಿಗಳಲ್ಲಿ ನೀರು ಬತ್ತಿವೆ. ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮಳೆಗಾಲದಲ್ಲೆ ಮಳೆ ಕೈಕೊಟ್ಟಿರುವುದರಿಂದ, ಮೇವಿನ ಲಭ್ಯತೆ ಇಲ್ಲದೆ ಕುಟುಂಬ ನಿರ್ವಹಣೆಗೆ ಸಹಾಯವಾಗಿರುವ ಹಸುಗಳನ್ನು ಇಲ್ಲಿನ ಜನರು ಮಾರಾಟ ಮಾಡುತ್ತಿದ್ದಾರೆ.  

ಆರೇಳು ವರ್ಷಗಳ ಕಾಲ  ತಮ್ಮ ಜಮೀನುಗಳಲ್ಲಿ ಲಕ್ಷಾಂತರ ಸಾಲ ಮಾಡಿ ಬೆಳೆಸಿರುವ, ತೋಟಗಾರಿಕೆಯ ಬೆಳೆಗಳಾದ, ಅಡಕೆ, ತೆಂಗು, ಮಾವು, ದಾಳಿಂಬೆ, ಸೇರಿದಂತೆ ಅನೇಕ ಬೆಳೆಗಳು ಬಾಡಿವೆ. ಹೀಗಾಗಿ ಸಾಮೂಹಿಕವಾಗಿ ಹತ್ತಾರು ಗ್ರಾಮಗಳ ಜನರು ಮಳೆಗಾಗಿ ಪ್ರಾರ್ಥಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments