Select Your Language

Notifications

webdunia
webdunia
webdunia
webdunia

ಕೊರೊನಾಕ್ಕೆ ಮೃತಪಟ್ಟವರ ಅಂತ್ಯ ಸಂಸ್ಕಾರದ ಬಗ್ಗೆ ಶಾಸಕಿ ಹೇಳಿದ್ದೇನು?

ಕೊರೊನಾಕ್ಕೆ ಮೃತಪಟ್ಟವರ ಅಂತ್ಯ ಸಂಸ್ಕಾರದ ಬಗ್ಗೆ ಶಾಸಕಿ ಹೇಳಿದ್ದೇನು?
ಕಾರವಾರ , ಮಂಗಳವಾರ, 7 ಜುಲೈ 2020 (19:38 IST)
ಕೋವಿಡ್-19ನಿಂದಾಗಿ ಮೃತಪಟ್ಟವರ ಅಂತ್ಯ ಸಂಸ್ಕಾರ ಮಾಡುವ ಕುರಿತು  ಅಧಿಕಾರಿಗಳಿಗೆ ಶಾಸಕಿ ಸೂಚನೆ ಕೊಟ್ಟಿದ್ದಾರೆ.

ಜನವಸತಿ ಇಲ್ಲದ ಪ್ರದೇಶದಲ್ಲಿ ಪ್ರತ್ಯೇಕ ಸ್ಥಳ ಗುರುತಿಸುವಂತೆ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕಿ ರೂಪಾಲಿ ನಾಯ್ಕ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಕೊರೊನಾ ಸೋಂಕಿನಿಂದ ದಾಖಲಾದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ನಂತರ ಆತನ ಅಂತ್ಯಸಂಸ್ಕಾರಕ್ಕೆ ಸಂಬಂಧಿಸಿದಂತೆ ಜನರು ವಿರೋಧ ವ್ಯಕ್ತಪಡಿಸಿದ್ದರು.

ಈ ಹಿನ್ನೆಲೆಯಲ್ಲಿ ಶಾಸಕಿ ರೂಪಾಲಿ ನಾಯ್ಕ, ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿ ಯಾವುದೇ ಕಾರಣಕ್ಕೂ ಜನವಸತಿ ಪ್ರದೇಶದಲ್ಲಿ ಕೋವಿಡ್-19ನಿಂದ ಮೃತಪಟ್ಟವರ ಅಂತ್ಯ ಸಂಸ್ಕಾರ ಮಾಡಬಾರದು.  ಜನವಸತಿಯಿಂದ ದೂರ ಇರುವ 10 ರಿಂದ 15 ಗುಂಟೆ ಸ್ಥಳವನ್ನು ಗುರುತಿಸಬೇಕು ಎಂದಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಅತ್ಯಾಚಾರ ಆರೋಪಿಗೆ ಕೊರೊನಾ ಪಾಸಿಟಿವ್