Webdunia - Bharat's app for daily news and videos

Install App

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ , ದ್ವಿತೀಯ ಪಿಯು ಪರೀಕ್ಷೆ ನಡೆಸುವ ಬಗ್ಗೆ ಶಿಕ್ಷಣ ಸಚಿವರು ಹೇಳಿದ್ದೇನು?

Webdunia
ಭಾನುವಾರ, 23 ಮೇ 2021 (11:02 IST)
ಬೆಂಗಳೂರು : ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ , ದ್ವಿತೀಯ ಪಿಯು ಪರೀಕ್ಷೆ ನಡೆಸುವ ವಿಚಾರ ಪರೀಕ್ಷೆಗಳನ್ನು ನಡೆಸುವ ಸಂಬಂಧ ಇಂದು ಮಹತ್ವದ ಸಭೆ ನಡೆಯಲಿದೆ. ದೆಹಲಿಯಲ್ಲಿ ಇಂದು ನಡೆವ ಕೇಂದ್ರ ಸಚಿವರ ಉನ್ನತ ಮಟ್ಟದ ಸಭೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ , ಸಚಿವರಾದ ರಾಜನಾಥ್ ಸಿಂಗ್, ಪ್ರಕಾಶ್ ಜಾವಡೇಕರ್ , ಸ್ಮೃತಿ ಇರಾನಿ ಎಲ್ಲಾ ರಾಜ್ಯದ ಶಿಕ್ಷಣ ಸಚಿವರು ಭಾಗಿಯಾಗಿ ತಮ್ಮ ನಿಲುವು ತಿಳಿಸಲಿದ್ದಾರೆ.

ಈ ಬಗ್ಗೆ ಮಾತನಾಡಿದ ರಾಜ್ಯದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು, ರಾಜ್ಯದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಕಷ್ಟ. ಈಗ ಪರೀಕ್ಷೆ ನಡೆಸಿದರೆ ಕೊರೊನಾ ಮತ್ತಷ್ಟು ಹೆಚ್ಚಾಗುತ್ತೆ. ಉಪಚುನಾವಣೆ ವೇಳೆ ಕೊರೊನಾಗೆ ಹಲವು ಶಿಕ್ಷಕರು ಸಾವನ್ನಪ್ಪಿದ್ದಾರೆ. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ್ದ ಶಿಕ್ಷಕರು ಮೃತಪಟ್ಟಿದ್ದಾರೆ. ಇನ್ನೂ ಹಲವು ಶಿಕ್ಷಕರು ಕೊರೊನಾದಿಂದ ಬಳಲುತ್ತಿದ್ದಾರೆ. ಈ ನಡುವೆ ರಾಜ್ಯಕ್ಕೆ 3ನೇ ಅಲೆ ಆತಂಕ ಎದುರಾಗಲಿದೆ. ಆದರೂ ದ್ವಿತಿಯ ಪಿಯು, ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಬೇಕು. ಆಗಸ್ಟ್ ವೇಳೆಗೆ ಸೋಂಕಿನ ಪ್ರಮಾಣ ತಗ್ಗುವ ಸಾಧ್ಯತೆಯಿದೆ. ಕೊರೊನಾ ಕಡಿಮೆಯಾದ ಬಳಿಕ ಪರೀಕ್ಷೆ ನಡೆಸಲು ಚಿಂತನೆ ನಡೆಸುವ ಬಗ್ಗೆ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರಕ್ಕೆ ಮೋದಿ ಭೇಟಿ: ಈ ವಸ್ತುಗಳು ನಿಮ್ಮಲ್ಲಿದ್ದರೆ ಕಾರ್ಯಕ್ರಮಕ್ಕಿಲ್ಲ ಎಂಟ್ರಿ

ಕ್ರಿಶ್ಚಿಯನ್ ಗೆ ಯಾಕೆ ದಲಿತ, ಕುರುಬ ಕಾಲಂ ಎಂದರೆ ಸಿದ್ದರಾಮಯ್ಯ ಹೇಳಿದ್ದೇನು ನೋಡಿ

ನಿಮ್ಮ ಮನೆಗೆ ಜಾತಿಗಣತಿಯವರು ಬಂದರೆ ಯಾವೆಲ್ಲಾ ದಾಖಲೆ, ಮಾಹಿತಿ ಕೊಡಬೇಕು

ಹೇಳದೇ ಕೇಳದೇ ವಿದೇಶಕ್ಕೆ ಹೋಗಿ ಬಿಡ್ತಾರೆ: ರಾಹುಲ್ ಗಾಂಧಿ ವಿರುದ್ಧ ಬಂತು ಆರೋಪ

ಭಾರತದ 15 ನೇ ಉಪರಾಷ್ಟ್ರಪತಿಯಾಗಿ ಪ್ರಮಾಣ ಸ್ವೀಕರಿಸಿದ ರಾಧಾಕೃಷ್ಣನ್

ಮುಂದಿನ ಸುದ್ದಿ
Show comments