Webdunia - Bharat's app for daily news and videos

Install App

ಆನೆ ಮರಿಗೆ ಮಾವುತರ ಮಕ್ಕಳು ಮಾಡಿದ್ದೇನು? ತಪ್ಪದೇ ಓದಿ

Webdunia
ಮಂಗಳವಾರ, 13 ಆಗಸ್ಟ್ 2019 (15:14 IST)
ಹೆಣ್ಣು ಆನೆ ಮರಿ 'ಶೃತಿ'ಗೆ  ಮಾವುತರ ಮಕ್ಕಳು ಈ ಕೆಲಸ ಮಾಡಿದ್ದಾರೆ. 

ಅಂತರಾಷ್ಟ್ರೀಯ ಆನೆಗಳ ದಿನದ ಅಂಗವಾಗಿ ಆನೆ ಮರಿಯೊಂದಕ್ಕೆ ನಾಮಕರಣ ಮಾಡಿ ಪ್ರತಿದಿನ ಆನೆಗಳನ್ನು ಸಾಕಿ ಸಲಹಿದಂತಹ ಮಾವುತರ ಮಕ್ಕಳ ಕೈನಲ್ಲಿ ಮಣ್ಣಿನಿಂದ ಎಲ್ಲಾ ರೀತಿಯ ಪ್ರಾಣಿಗಳನ್ನು ಮಾಡಿಸಲಾಗಿದೆ. ಅವುಗಳನ್ನು ಸಾರ್ವಜನಿಕರ ಪ್ರದರ್ಶನಕ್ಕಿಡುವ  ಮೂಲಕ  ವಿನೂತನವಾಗಿ ಅಂತರಾಷ್ಟ್ರೀಯ ಆನೆಗಳ ದಿನಾಚರಣೆಯನ್ನು ಆಚರಿಸಲಾಗಿದೆ.

ಬೆಂಗಳೂರು ಹೊರವಲಯ ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ನಲ್ಲಿ ಅಂತರಾಷ್ಟ್ರೀಯ ಆನೆಗಳ ದಿನವನ್ನು ಅದ್ದೂರಿಯಾಗಿ ಆಚರಣೆ ಮಾಡಲಾಗಿದೆ. ಮಾವುತರ ಮಕ್ಕಳ ಕೈನಿಂದ ಬಿದಿರಿನ ವಸ್ತುಗಳನ್ನು, ಮಣ್ಣಿನಿಂದ ಮಾಡಿದ ಆನೆ, ಮೊಸಳೆ ಸೇರಿದಂತೆ ವಿವಿಧ ಪ್ರಾಣಿಗಳನ್ನು ಸಾರ್ವಜನಿಕರ ಪ್ರದರ್ಶನಕ್ಕಿಟ್ಟು ಪ್ಲಾಸ್ಟಿಕ್ ವಸ್ತುಗಳನ್ನು ಬಳಸಬೇಡಿ ಎಂಬ ಸಂದೇಶವನ್ನು ಪ್ರವಾಸಿಗರಿಗೆ ರವಾನೆ ಮಾಡಿದರು.

ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ ನಲ್ಲಿ 22 ಆನೆಗಳಿದ್ದು, ಅದರಲ್ಲಿನ ಒಂದು ಮರಿಗೆ ಸಾರ್ವಜನಿಕರು ಹಾಗೂ  ಪ್ರವಾಸಿಗರು ಸೂಚಿಸಿದ ಕೆಲವು ಹೆಸರುಗಳನ್ನು ತೆಗೆದುಕೊಂಡು ಒಂದು ಹೆಣ್ಣು ಮಗುವಿನ ಕೈನಲ್ಲಿ ಆ ಚೀಟಿಯನ್ನು ತೆಗೆಸಿಕೊಳ್ಳುವ ಮೂಲಕ ಆನೆ ಮರಿಗೆ ‘ಶೃತಿ’ ಎಂಬ ಹೆಸರನ್ನು ಇಡಲಾಗಿದೆ ಎಂದು ಬನ್ನೇರುಘಟ್ಟ ಬಯೋಲಾಜಿಕಲ್ ಪಾರ್ಕ್ನ ಇಡಿ ವನಶ್ರೀ ತಿಳಿಸಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

E Tukaram: ಬಳ್ಳಾರಿ ಚುನಾವಣೆಗೆ ಬರೋಬ್ಬರಿ 21 ಕೋಟಿ ಹಣ ಬಳಕೆ: ಸಂಸದ ಇ ತುಕರಾಂ ಇಡಿ ವಶಕ್ಕೆ

Gold price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvamshi murder: ಗುಡ್ಡ ಹತ್ತಿ ಸುಸ್ತು ಎಂದಿದ್ದ ಹಂತಕರಿಗೆ ಸೋನಂ ನೀಡಿದ್ದ ಆಫರ್ ಏನು

Raj Raghuvamshi murder: ಸೋನಂಳನ್ನು ಅಕ್ಕ ಎನ್ನುತ್ತಿದ್ದ ಮರ್ಡರ್ ಆದ ದಿನವೂ ಊರಲ್ಲೇ ಇದ್ದ

Indore Raja Raghuvamshi murder: ವಿಮಾನ ನಿಲ್ದಾಣದಲ್ಲೇ ಆರೋಪಿ ರಾಜ್ ಕುಶ್ವಾಹ್ ಗೆ ಕಪಾಳ ಮೋಕ್ಷ ವಿಡಿಯೋ

ಮುಂದಿನ ಸುದ್ದಿ
Show comments