Webdunia - Bharat's app for daily news and videos

Install App

ಸಚಿವ ಸ್ಥಾನದ ಆಕಾಂಕ್ಷಿ ಬಿ.ಸಿ ಪಾಟೀಲ್ ಬಗ್ಗೆ ಸಚಿವ ಜಮೀರ್ ಅಹ್ಮದ್ ಹೇಳಿದ್ದೇನು?

Webdunia
ಶುಕ್ರವಾರ, 23 ನವೆಂಬರ್ 2018 (06:46 IST)
ಹಾವೇರಿ : ಸಚಿವ ಸ್ಥಾನದ ಆಕಾಂಕ್ಷಿಯಾದ ಶಾಸಕ ಬಿಸಿ ಪಾಟೀಲ್ ಅವರಿಗೆ ಮುಂದಿನ ಸಚಿವ ಸಂಪುಟ ವಿಸ್ತರಣೆಗೆ ವೇಳೆ ಮಂತ್ರಿಸ್ಥಾನ ನೀಡಲಾಗುವುದು ಎಂದು ಸಚಿವ ಜಮೀರ್ ಅಹ್ಮದ್ ಭರವಸೆ ನೀಡಿದ್ದಾರೆ.


ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಜಮೀರ್ ಅಹ್ಮದ್, ಶಾಸಕ ಬಿಸಿ ಪಾಟೀಲ್ ನನಗಿಂತ ಹಿರಿಯರು. ನಾನು ಅವರನ್ನು ಮಂತ್ರಿ ಮಾಡಬೇಕೆಂದು ಮುಖಂಡರಿಗೆ ತಿಳಿಸಿದ್ದೇನೆ. ಖಂಡಿತ ಅವರು ಈ ಬಾರಿ ಸಚಿವರಾಗುತ್ತಾರೆ. ಮುಂದಿನ ಡಿಸೆಂಬರ್ 3ರ ಒಳಗೆ ಈ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ ಎಂದು ತಿಳಿಸಿದ್ದಾರೆ.


ಇದೇ ವೇಳೆ ಮಾತನಾಡಿದ ಶಾಸಕ ಬಿಸಿ ಪಾಟೀಲ್, ನಾನು ಸಚಿವ ಸ್ಥಾನದ ಪ್ರಮುಖ ಆಕಾಂಕ್ಷಿಯಾಗಿದ್ದು, ಯಾವುದಕ್ಕೂ ಈಗಲೇ ನಿರ್ಧಾರ ಕೈಗೊಳ್ಳುವುದಿಲ್ಲ. ಕಳೆದ 4, 5 ತಿಂಗಳಿನಿಂದ ಸಚಿವ ಸ್ಥಾನ ಬಗ್ಗೆ ಕಾಯುತ್ತಿದ್ದೇನೆ. ಇನ್ನು ಹತ್ತು ದಿನ ಕಾಯುವುದರಲ್ಲಿ ಏನು ಆಗುವುದಿಲ್ಲ. ಇಲ್ಲವಾದರೆ ಶಾಸಕನಾಗಿಯೇ ಇರುತ್ತೇನೆ. ಸಚಿವನಾದರೆ ತಾಲೂಕಿನ, ಜಿಲ್ಲೆಯ ಸೇವೆ ಮಾಡಲು ಸಹಕಾರ ಆಗಲಿದೆ.


ಶೀಘ್ರವೇ ಸಂಪುಟ ರಚನೆ ಮಾಡುವುದಾಗಿ ಹೇಳಿದ್ದಾರೆ. ಈ ಬಾರಿ ಆಗದಿದ್ದರೆ ಇನ್ನೊಂದು ದಿನಾಂಕ ಕೊಡಬಹುದು. ನಾನು ಆಶಾವಾದಿಯಾಗಿದ್ದು, ತಾಳಿದವನು ಬಾಳಿಯಾನು ಎಂಬಂತೆ ನಾನು ಶಾಸನಾಗಿಯೇ ಇರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments