Webdunia - Bharat's app for daily news and videos

Install App

ಸತೀಶ್ ಜಾರಕಿಹೊಳಿ ಸಿಡಿಸಿದ ಹೊಸ್ ಬಾಂಬ್ ಏನು ಗೊತ್ತಾ?

Webdunia
ಮಂಗಳವಾರ, 4 ಡಿಸೆಂಬರ್ 2018 (20:26 IST)
ಶ್ರೀರಾಮುಲು ಆಪ್ತ ಹಾಗೂ ದುಬೈ ಉದ್ಯಮಿ ನಡುವೆ ಬಹಿರಂಗಗೊಂಡ ಆಡಿಯೋ ಕ್ಲಿಪ್ ವಿಚಾರಕ್ಕೆ ಸಂಬಂಧಿಸಿದಂತೆ
ಬೆಳಗಾವಿಯಲ್ಲಿ ಶಾಸಕ ಸತೀಶ್ ಜಾರಕಿಹೊಳಿ ಹೊಸ್ ಬಾಂಬ್ ಸಿಡಿಸಿದ್ದಾರೆ.

ಬಿಜೆಪಿಗೆ ಹೋದ್ರೆ 7-8 ಜನ ಶಾಸಕರು ಹೋಗಬಹುದು. 25 ಜನ ಹೋಗಲ್ಲ ಎಂದಿದ್ದಾರೆ.
7-8 ಜನ ಶಾಸಕರಿಗೆ ಅಸಮಾಧಾನ ಇದೆ. ಆದರೆ ಅವರು ಪಕ್ಷ ಬಿಟ್ಟು ಹೋಗಲ್ಲ. 7-8 ಜನ ಹೋದ್ರೆ ಸರಕಾರಕ್ಕೆ ತೊಂದರೆ ಇಲ್ಲ ಸರ್ಕಾರ ಸೇಫ್ ಆಗಿರುತ್ತೆ ಎಂದು ಹೇಳಿದರು.

ಬಿಜೆಪಿಯವರು 6 ತಿಂಗಳಿನಿಂದಲೂ  ಆಮಿಷವೊಡ್ಡುತ್ತಲೇ ಬಂದಿದ್ದಾರೆ. ಅದಕ್ಕೆ ಹೆಚ್ಚಿನ ಮಹತ್ವ ಕೊಡೋದು ಬೇಡ.
ನಾನಂತೂ ಎಲ್ಲಿಯೂ ಹೋಗುವುದಿಲ್ಲ. ಹೀಗಾಗಿ ಇವುಗಳಿಗೆ ಹೆಚ್ಚಿನ ಮಹತ್ವ ಕೊಡುವ ಅಗತ್ಯವಿಲ್ಲ ಎಂದರು.

ಮುಂಬೈ ರೆಸಾರ್ಟ್ ಗೆ ಕೆಲ ಶಾಸಕರು ಹೋಗ್ತಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅದೇ ನಾನು ಹೇಳಿದ್ದೇನೆ ಕೆಲವರಿದ್ದಾರೆ.  ಆದರೆ ಖಂಡಿತವಾಗಿಯೂ ಅದು ಯಶಸ್ವಿಯಾಗೋದಿಲ್ಲ. ಅಧಿವೇಶನಕ್ಕೆ ಮುಂಚೆ ಸಚಿವ ಸಂಪುಟ ವಿಸ್ತರಣೆ  ಆದರೂ ಆಗಬಹುದು. ನಾನು ಸಚಿವ ಸ್ಥಾನ ಆಕಾಂಕ್ಷಿ ಅಲ್ಲ. ಒಂದೇ ಮನೆಯಲ್ಲಿ ಇಬ್ಬರಿಗೆ ಸಚಿವ ಸ್ಥಾನ ಕೊಡಲು ಸಾಧ್ಯವಿಲ್ಲ. ನಾನು ಶಾಸಕನಾಗಿದ್ದುಕೊಂಡೆ ಸಾಕಷ್ಟು ಪವರಫುಲ್ ಆಗಿದ್ದೇನೆ ಎಂದರು.  

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments