Webdunia - Bharat's app for daily news and videos

Install App

ಶ್ರೀರಾಮುಲು ಬಗ್ಗೆ ಕರುಣಾಕರ ರೆಡ್ಡಿ ಸಿಡಿಸಿದ ಬಾಂಬ್ ಏನು ಗೊತ್ತಾ?

Webdunia
ಗುರುವಾರ, 25 ಅಕ್ಟೋಬರ್ 2018 (15:56 IST)
ಮಾಜಿ ಸಚಿವ ಜನಾರ್ಧನ ರೆಡ್ಡಿ ಜತೆಗೆ ಸಕ್ರೀಯ ರಾಜಕಾರಣದಲ್ಲಿ ಭಾಗಿಯಾಗುವ ಬಗ್ಗೆ ಕಾಲವೇ ಹೇಳುತ್ತೆ ಎಂದಿರುವ ಹರಪ್ಪನಹಳ್ಳಿ ಶಾಸಕ ಕರುಣಾಕರ ರೆಡ್ಡಿ, ಬಿ.ಶ್ರೀರಾಮುಲು ಬಗ್ಗೆಯೂ ಹೇಳಿಕೆ ನೀಡಿದ್ದಾರೆ.

ನನ್ನ ಹಾಗೂ ಶ್ರೀರಾಮುಲು ಮಧ್ಯೆ ಯಾವುದೇ ಅಸಮಾಧಾನವಿಲ್ಲ. ಬಳ್ಳಾರಿ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ. ಜನಾರ್ಧನ ರೆಡ್ಡಿ ಜೊತಗೆ ಸಕ್ರೀಯ ರಾಜಕಾರಣದಲ್ಲಿ ಭಾಗಿಯಾಗುವ ಬಗ್ಗೆ ಕಾಲವೇ ಹೇಳುತ್ತೆ ಎಂದು ಹರಪ್ಪನಹಳ್ಳಿ ಶಾಸಕ ಕರುಣಾಕರ ರೆಡ್ಡಿ ಹೇಳಿದ್ದಾರೆ.

ಜಮಖಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಪರ ಪ್ರಚಾರಕ್ಕಾಗಿ ಬಾಗಲಕೋಟೆಗೆ ಆಗಮಿಸಿದ್ದ ಕರುಣಾಕರ ರೆಡ್ಡಿ, ಸಹೋದರರ ನಡುವಿನ ಮುನಿಸು, ವಯಕ್ತಿಕ ವಿಚಾರ, ಮಾಧ್ಯಮಗಳ ಎದುರು ಹೇಳಲು ಇಷ್ಟಪಡೋದಿಲ್ಲ, ನನಗೆ ಇದುವರೆಗೂ ಬಳ್ಳಾರಿ ಲೋಕಸಭಾ ಅಭ್ಯರ್ಥಿ ಜೆ, ಶಾಂತಾ ಪರ ಪ್ರಚಾರಕ್ಕೆ ಯಾರೂ ಕರೆದಿಲ್ಲ. ಪಕ್ಷದ ಮುಖಂಡರು ಸೂಚಿಸಿದರೆ ಖಂಡಿತವಾಗಿಯೂ ಪ್ರಚಾರ ಮಾಡುತ್ತೇನೆ ಎಂದರು.
ಸಿದ್ದರಾಮಯ್ಯನವರು ಬಿ.ಶ್ರೀರಾಮುಲುಗೆ 420 ಎಂದ ಹೇಳಿಕೆಗೆ ತಿಗೇಟು ನೀಡಿ, ರಾಜಕಾರಣದಲ್ಲಿ ಟೀಕೆಗಳಿರಬೇಕು.
ಆದರೆ ಯಾರೂ ಪದಗಳನ್ನ ತಪ್ಪಾಗಿ ಬಳಸಬಾರದು. ಗೌರವಯುತವಾಗಿ ಮಾತನಾಡಬೇಕು ಎಂದರು.

ಇನ್ನು ಬಳ್ಳಾರಿಗೆ ಡಿ.ಕೆ.ಶಿವಕುಮಾರ ಲಗ್ಗೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಬಳ್ಳಾರಿಯಲ್ಲಿ 22 ವರ್ಷದಿಂದ ಪಕ್ಷ ಸಂಘಟನೆ ಮಾಡಿಕೊಂಡು ಬಂದಿದ್ದೇವೆ. ಜನರು ಬಿಜೆಪಿಗೆ ಆಶೀರ್ವಾದ ಮಾಡುತ್ತಾ ಬಂದಿದ್ದಾರೆ. ರಾಜಕೀಯದಲ್ಲಿ ಯಾರು ಲಗ್ಗೆ ಇಡುತ್ತಾರೆ ಎಂಬ ಪ್ರಶ್ನೆ ಬರೋದಿಲ್ಲ. ಆದ್ರೆ ಯಾರೇ ಲಗ್ಗೆ ಇಟ್ಟರೂ ಜನ ತೀರ್ಮಾನ ಮಾಡುತ್ತಾರೆ ಎಂದರು. ನಾವು ಯಾವುದೇ ಸಮುದಾಯಕ್ಕೆ ಸೀಮಿತವಾದವರಲ್ಲ. ಪಕ್ಷದ ವರಿಷ್ಠರು ಎಲ್ಲೆಲ್ಲಿ ಪ್ರಚಾರಕ್ಕೆ ಹೇಳ್ತಾರೋ ಅಲ್ಲಿಗೆ ಹೋಗಿ ಪಕ್ಷದ ಅಭ್ಯರ್ಥಿಯ ಪರ ಪ್ರಚಾರ ಮಾಡುತ್ತೇನೆ ಎಂದರು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ಮುಂದಿನ ಸುದ್ದಿ
Show comments