ಅಂಬರೀಶ್ ಸಾವಿಗೂ ಮುನ್ನ ಆ ಕೊನೆಯ ಕ್ಷಣದಲ್ಲಿ ಏನಾಗಿತ್ತು ಗೊತ್ತಾ?

Webdunia
ಮಂಗಳವಾರ, 27 ನವೆಂಬರ್ 2018 (10:03 IST)
ಬೆಂಗಳೂರು: ಶನಿವಾರ ರಾತ್ರಿ ನಮ್ಮನ್ನು ಅಗಲಿದ ಹಿರಿಯ ನಟ ಅಂಬರೀಶ್ ಸಾವಿನ ಕೆಲವೇ ಕ್ಷಣಗಳ ಮೊದಲು ಹೇಗಿದ್ದರು ಎಂಬ ಸಂಗತಿಯನ್ನು ಅವರ ಆಪ್ತರೊಬ್ಬರು ಮಾಧ್ಯಮದೊಂದಿಗೆ ಹಂಚಿಕೊಂಡಿದ್ದಾರೆ.

ಅಂಬರೀಶ್ ಶನಿವಾರ ರಾತ್ರಿ ಊಟ ಮುಗಿಸಿ ಸ್ವಲ್ಪ ಹೊತ್ತು ಟಿವಿ ನೋಡುತ್ತಾ ಕುಳಿತಿದ್ದರಂತೆ. ಆ ಸಂದರ್ಭದಲ್ಲಿ ಟಿವಿಯಲ್ಲಿ ಅಂದು ಮಂಡ್ಯದಲ್ಲಿ ನಡೆದಿದ್ದ ಬಸ್ ದುರಂತದ ಬಗ್ಗೆ ಸುದ್ದಿ ಪ್ರಸಾರವಾಗುತ್ತಿತ್ತು.

ಅದನ್ನು ನೋಡಿ ವಿಚಲಿತರಾಗಿದ್ದರೋ ಏನೋ, ಆಗಾಗ ಚಾನೆಲ್ ಬದಲಾಯಿಸುತ್ತಾ ಕೂತಿದ್ದವರು, ಸಾಕು ಇನ್ನು ಮಲಗುತ್ತೇನೆ ಎಂದು ತಮ್ಮ ಕೊಠಡಿಗೆ ತೆರಳಿದ್ದರು. ಕೆಲವೇ ಕ್ಷಣಗಳ ನಂತರ ವಿಪರೀತ ಎದೆ, ಬೆನ್ನು ನೋಯುತ್ತಿದೆ ಎಂದು ಜೋರಾಗಿ ಕೂಗಿಕೊಂಡರಂತೆ.

ಅಂಬಿ ಕೂಗಿದ ಸದ್ದಿಗೆ ಅವರ ಕೇರ್ ಟೇಕರ್ ಗಳು ಓಡಿ ಹೋಗಿ ಅವರ ಬೆನ್ನು, ಕುತ್ತಿಗೆ ಮಸಾಜ್ ಮಾಡಿ ಕೃತಕ ಉಸಿರಾಟ ಅಳವಡಿಸಿದ್ದರಂತೆ. ನಂತರ ವೀಲ್ ಚೇರ್ ನಲ್ಲಿ ಕೂರಿಸಿಕೊಂಡು ಲಿಫ್ಟ್ ಮೂಲಕ ಅವರನ್ನು ಕೆಳಗೆ ಕಾರಿನ ಬಳಿ ತರುವಷ್ಟರಲ್ಲೇ ಅಂಬಿ ಉಸಿರಾಟ ನಿಲ್ಲಿಸಿದ್ದರು. ಅವರ ಮೈ ತಣ್ಣಗಾಗಿತ್ತು, ಎದೆ ಬಡಿತವೂ ನಿಂತಿತ್ತು ಎಂದು ಆಪ್ತರು ವಿವರಿಸಿದ್ದಾರೆ. ಇದೆಲ್ಲಾ ಕೇವಲ ಅರ್ಧಗಂಟೆಯೊಳಗೆ ನಡೆದು ಹೋಗಿತ್ತು. ಏನಾಗುತ್ತಿದೆ ಎಂದು ತಿಳಿಯುವಷ್ಟರಲ್ಲಿ ಅಂಬಿ ಇಹಲೋಕ ತ್ಯಜಿಸಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments