Webdunia - Bharat's app for daily news and videos

Install App

ದೇವೇಗೌಡ್ರ ಮನೆಯಲ್ಲಿ ತಡರಾತ್ರಿ ನಡೆದ ಸಭೆಯಲ್ಲಿ ಏನಾಯ್ತು?

Webdunia
ಭಾನುವಾರ, 17 ಮಾರ್ಚ್ 2019 (15:02 IST)
ತುಮಕೂರು ಲೋಕಸಭಾ ಚುನಾವಣಾ ಕಣಕ್ಕಿಳಿಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್  ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಟ್ಟಿದ್ದು, ತುಮಕೂರು ಕಾಂಗ್ರೆಸ್ ಕೈ ತಪ್ಪುವ ಸಾಧ್ಯತೆ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ತಮ್ಮ ಪಕ್ಷದ ನಾಯಕರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ತುಮಕೂರು ಕಾಂಗ್ರೆಸ್ ಗೆ ಬಿಟ್ಟುಕೊಡಬೇಕು ಎಂದು ಉಪ ಮುಖ್ಯಮಂತ್ರಿ ಪರಮೇಶ್ವರ ಪಟ್ಟು ಹಿಡಿದಿದ್ದು, ಕೊನೆಯ ಪ್ರಯತ್ನವಾಗಿ ಹಾಲಿ ಸಂಸದ ಮುದ್ದಹುನುಮೇ ಗೌಡರನ್ನು ದೆಹಲಿಗೆ ಕಳುಹಿಸಿ ಕೊಡಲಾಗಿದೆ. ಈ ವೇಳೆ ತುಮಕೂರು ಮತಕ್ಷೇತ್ರದಿಂದ ಕಾಂಗ್ರೆಸ್ ಸ್ಪರ್ಧೆ ಕುರಿತು ಪಕ್ಷದ ಹೈಕಮಾಂಡ್ ಜೊತೆ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ.

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ದೆಹಲಿಯಲ್ಲಿ ಭೇಟಿ ಮಾಡಿದ್ದ ಮುದ್ದಹನುಮೇಗೌಡರು ತುಮಕೂರು ಹಾಗೂ ಬೆಂಗಳೂರು ಉತ್ತರ ಕ್ಷೇತ್ರ ಕುರಿತು ಗಂಭೀರ ಚರ್ಚೆ ನಡೆಸಿದ್ದರು. ಆದರೆ ಯಾವುದೇ ಸಕಾರಾತ್ಮಕ ಪರಿಣಾಮ ಬಾರದ ಕಾರಣ ತುಮಕೂರು ಮರಳಿ ಸಿಗುವ ಸಾಧ್ಯತೆ ಕಡಿಮೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರ ವಿರುದ್ಧ ಪರಮೇಶ್ವರ್ ಮುನಿಸಿಕೊಂಡಿದ್ದಾರೆ.

ಈ ಮಧ್ಯೆ ಜಿ.ಪರಮೇಶ್ವರ್ ಅವರ ಮನವೊಲಿಕೆಗೆ ಮುಂದಾಗಿರುವ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹಾಗೂ ಇತರ ಕೈ ನಾಯಕರು ಪರಮೇಶ್ವರ್ ನಿವಾಸಕ್ಕೆ ಭೇಟಿ ನೀಡಿ ಸಂಸದ ಮುದ್ದಹನುಮೇಗೌಡರಿಗೆ ಸೂಕ್ತ ಸ್ಥಾನಮಾನ ಕೊಡುವುದಾಗಿ ಭರವಸೆ ನೀಡಿದ್ದಾರೆ.

ಇತ್ತ ದೇವೇಗೌಡರ ನಿವಾಸದಲ್ಲಿ ನಿನ್ನೆ ರಾತ್ರಿ 1 ರಿಂದ 3.30ರ ವರೆಗೆ ಹೆಚ್.ಡಿ. ದೇವೇಗೌಡ, ಸಿಎಂ ಕುಮಾರಸ್ವಾಮಿ, ಎಚ್.ಡಿ.ರೇವಣ್ಣ ಅವರು ಸಭೆ ನಡೆಸಿದ್ದು, ತುಮಕೂರು ಕ್ಷೇತ್ರದಿಂದ ದೇವೇಗೌಡರೇ ಸ್ಪರ್ಧಿಸಲು ಚಿಂತನೆ ನಡೆಸಲಾಗಿದೆ.

ಜೆಡಿಎಸ್, ತುಮಕೂರು ಲೋಕಸಭಾ ಕ್ಷೇತ್ರವನ್ನು ಕೈಗೆ ಬಿಟ್ಟು ಕೊಡುವ ಸಾಧ್ಯತೆ ಕಡಿಮೆ ಇದ್ದು, ದೇವೇಗೌಡರು ಸ್ಪರ್ಧೆಯಿಂದ ದೂರ ಉಳಿದರೆ ಕ್ಷೇತ್ರವನ್ನು ಕಾಂಗ್ರೆಸ್​ಗೆ ಬಿಟ್ಟುಕೊಡುವ ಅನಿವಾರ್ಯತೆ ಬಂದೋದಗಲಿದೆ. ಒಂದು ವೇಳೆ ತುಮಕೂರು ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟು ಕೊಟ್ಟಲ್ಲಿ ಜೆಡಿಎಸ್​ ಕ್ಷೇತ್ರ 8 ರಿಂದ 7ಕ್ಕೆ ಇಳಿಯಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಕಸದಲ್ಲಿ ಶಿಶುವಿನ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್‌: ಅಪ್ರಾಪ್ತೆಗೆ ಗರ್ಭಪಾತ ಮಾಡಿಸಿದ್ದ ಆಟೊ ಚಾಲಕ ಅಂದರ್‌

ಜಮ್ಮು ಕಾಶ್ಮೀರದಲ್ಲಿ ಮೇಘ ಸ್ಫೋಟಕ್ಕೆ ಜನರು ತತ್ತರ: ಹಲವು ಮನೆಗಳು ಧ್ವಂಸ, ಐವರು ಸಾವು

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಮುಂದಿನ ಸುದ್ದಿ
Show comments