Publish Date: Tue, 13 Jan 2026 (16:23 IST)
Updated Date: Tue, 13 Jan 2026 (16:26 IST)
ಮೈಸೂರು: ಸಿಎಂ ಕುರ್ಚಿ ಬದಲಾವಣೆ ವಿಚಾರದಿಂದ ಡಿಕೆ ಶಿವಕುಮಾರ್ ಅವರು ರಾಹುಲ್ ಗಾಂಧಿಯಿಂದ ದೂರವಾಗಿದ್ದಾರೆಂಬ ಮಾತು ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ. ಇದಕ್ಕೆಲ್ಲ ಕಾರಣ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ.
ತಮಿಳುನಾಡಿನಲ್ಲಿ ವಿವಿಧ ಕಾರ್ಯಕ್ರಮಕ್ಕೆ ಭಾಗಿಯಾಗಲು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರು ಮೈಸೂರಿಗೆ ಆಗಮಿಸಿದರು. ರಾಹುಲ್ ಗಾಂಧಿಯನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ವಾಗತಿಸಿದರು. ಆದರೆ ಡಿಕೆ ಶಿವಕುಮಾರ್ ಅವರು ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯಿಂದ ಅಂತವರನ್ನು ಕಾಯ್ದುಕೊಂಡಿದ್ದರು.
ಸಿಎಂ ಕುರ್ಚಿ ಗುದ್ದಾಟದಿಂದಾಗಿ ಡಿಕೆ ಶಿವಕುಮಾರ್ ಅವರು ರಾಹುಲ್ ಗಾಂಧಿಯಿಂದ ದೂರವಾಗಿದ್ದಾರೆಂದು ಎಂದು ಹೇಳಲಾಗುತ್ತಿದೆ. ರಾಹುಲ್ ಗಾಂಧಿಯನ್ನು ಸ್ವಾಗತಿಸುವಾಗಲು ಹಾಗೂ ಅವರ ಜತೆ ಮಾತುಕತೆ ನಡೆಸುವಾಗಲೂ ಡಿಕೆಶಿ ದೂರದಲ್ಲಿಯೇ ನಿಂತುಕೊಂಡಿದ್ದರು. ವಿಡಿಯೋ ನೋಡಿ, ರಾಜ್ಯ ರಾಜಕಾರಣದಲ್ಲಿ ಹೊಸ ಚರ್ಚೆಯಾಗುತ್ತಿದೆ.
ರಾಜ್ಯದಲ್ಲಿ ಸಿಎಂ ಕುರ್ಚಿ ಬದಲಾವಣೆ ಬಳಿಕ ಡಿಕೆ ಶಿವಕುಮಾರ್ ಅವರು ರಾಹುಲ್ನಿಂದ ದೂರವಾಗಿದ್ದಾರೆ ಎನ್ನಲಾಗಿದೆ. ಇನ್ನೂ ಸಿದ್ದರಾಮಯ್ಯ ಅವರು ತುಂಬಾ ಆತ್ಮೀಯವಾಗಿ ರಾಹುಲ್ ಗಾಂಧಿಯನ್ನು ಸ್ವಾಗತಿಸಿದ್ದಾರೆ.