Select Your Language

Notifications

webdunia
webdunia
webdunia
webdunia

ಲಂಚ ಸ್ವೀಕರಿಸುತ್ತಿದ್ದ ತಹಸೀಲ್ದಾರ್ ಗೆ ಆಗಿದ್ದೇನು?

ಲಂಚ ಸ್ವೀಕರಿಸುತ್ತಿದ್ದ ತಹಸೀಲ್ದಾರ್ ಗೆ ಆಗಿದ್ದೇನು?
ಕೊಪ್ಪಳ , ಸೋಮವಾರ, 20 ಜುಲೈ 2020 (17:20 IST)
ಲಂಚ ಸ್ವೀಕರಿಸುತ್ತಿದ್ದ ತಹಸೀಲ್ದಾರ್, ಶಿರಸ್ತೇದಾರ್ ರನ್ನು ಬಂಧನ ಮಾಡಲಾಗಿದೆ.

ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಕೊಪ್ಪಳ ಜಿಲ್ಲೆಯ ಗಂಗಾವತಿಯ ತಹಸೀಲ್ದಾರ್ ಹಾಗೂ ಶಿರಸ್ತೇದಾರ್ ಅವರನ್ನು ಬಂಧಿಸಿದ್ದಾರೆ.

ತಹಸೀಲ್ದಾರ್ ಚಂದ್ರಕಾಂತ್, ಭೂಮಿ ಕೇಂದ್ರದ ಶಿರಸ್ತೇದಾರ್ ಶರಣಪ್ಪ ಬಂಧಿತರಾಗಿದ್ದಾರೆ.  ಗಂಗಾವತಿ ತಾಲೂಕಿನ ವಡ್ಡರಹಟ್ಟಿ ಕ್ಯಾಂಪಿನ ಸುಂದರ್ ರಾಜ್ ಎಂಬುವರಿಗೆ ಖಾತಾ ಉತಾರ್ ಬದಲಾಯಿಸಲು 6 ಸಾವಿರ ರೂ. ಲಂಚದ ಬೇಡಿಕೆ ಇಟ್ಟಿದ್ದರು.

ಸುಂದರ್ ರಾಜ್ ಅವರು ಎಸಿಬಿಗೆ ದೂರು ಸಲ್ಲಿಸಿದ ಹಿನ್ನೆಲೆಯಲ್ಲಿ ಲಂಚ ಸ್ವೀಕರಿಸುವ ವೇಳೆಯಲ್ಲಿ ಬಳ್ಳಾರಿ ಎಸ್ಪಿ ಬಿ.ಎಸ್.ನೇಮಗೌಡ, ಡಿವೈಎಸ್ಪಿ ರುದ್ರೇಶ್ ಉಜ್ಜನಕೊಪ್ಪ, ಇನ್ಸ್ ಪೆಕ್ಟರ್ ಗಳಾದ ಬೀಳಗಿ, ಎಸ್.ಎಸ್.ಗುರುರಾಜ್ ನೇತೃತ್ವದಲ್ಲಿ ದಾಳಿ ನಡೆಸಿದೆ. ಆರೋಪಿಗಳನ್ನು ಬಂಧಿಸಿ, ನಗದು ವಶಪಡಿಸಿಕೊಳ್ಳಲಾಗಿದೆ.




Share this Story:

Follow Webdunia kannada

ಮುಂದಿನ ಸುದ್ದಿ

ಪೊಲೀಸ್ ಕಾನ್ಸಟೇಬಲ್ ಗೆ ಹಳಸಿದ ಅನ್ನ ಕೊಡೊದಾ?